Homeಮುಖಪುಟತ್ರಿಮೂರ್ತಿ ಎಂಬ ಕನ್ನಡಿ

ತ್ರಿಮೂರ್ತಿ ಎಂಬ ಕನ್ನಡಿ

- Advertisement -
- Advertisement -

ತನ್ನ ಬದುಕಿನುದ್ದಕ್ಕೂ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡು, ಮೈಮನಸ್ಸುಗಳ ತುಂಬಾ ಕನಸುಗಳನ್ನು ಹೊತ್ತು ತಿರುಗುತ್ತಿದ್ದ ಗೆಳೆಯ ತ್ರಿಮೂರ್ತಿ ಕಣ್ಮರೆಯಾಗಿ ತಿಂಗಳಾಗಿದೆ. ಈ ನಡುವೆ ನಾವು ಬದುಕುತ್ತಿರುವ ಸಮಾಜ ಹಲವು ಹೊರಳುಗಳಿಗೆ ಪಕ್ಕಾಗಿ ಲೆಕ್ಕವಿಟ್ಟುಕೊಳ್ಳಲಾಗದಷ್ಟು ಬದಲಾಗಿದೆ. ಅಡುಗೆಗಾಗಿ ಬಳಸುವ ಗ್ಯಾಸ್ ಬೆಲೆ ಮತ್ತೊಮ್ಮೆ ಜಾಸ್ತಿಯಾಗಿದೆ; ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳು, ದಲಿತರ ಮೇಲಿನ ದೌರ್ಜನ್ಯಗಳು ಸಮಾಜದ ಕುರುಡು, ಕಿವುಡನ್ನು ಎತ್ತಿ ತೋರಿಸುತ್ತಿವೆ. ತ್ರಿಮೂರ್ತಿ ಹೋದ ದಿನದಿಂದ ಈದಿನದವರೆಗೂ ಅವನು ಇದಕ್ಕೆಲ್ಲಾ ಹೇಗೆ ಪ್ರತಿಕ್ರಿಯಿಸುತ್ತಿದ್ದ ಎನ್ನುವ ಲೆಕ್ಕಾಚಾರ ಮನಸ್ಸಿನಲ್ಲಿ ಸುಳಿದು, ತನ್ನ ಅಷ್ಟಗಲ ನಗುವಿಗೆ ಕೆನ್ನೆ ಮೇಲೆ ಇನ್ವೈಟೆಡ್ ಕಾಮಾ ಹಾಕುತ್ತಿದ್ದ ಅವನ ಮುಖ ನೆನಪಾಗಿ ಪಿಚ್ಚೆನಿಸುತ್ತದೆ. ಮತ್ತೆ ಆ ಕ್ಷಣಗಳೆಲ್ಲಾ ಎದೆಯಲ್ಲಿ ಆತಂಕದ ಬೀಜ ನೆಟ್ಟ ಅನುಭವಗಳಾಗಿ ಮಾರ್ಪಾಡಾಗುತ್ತವೆ.

ಕರ್ನಾಟಕದ ಪ್ರಬಲ ಸಮುದಾಯವೊಂದರಲ್ಲಿ ಹುಟ್ಟಿದ ತ್ರಿಮೂರ್ತಿ ತನ್ನ ಸಾವಿನ ಕ್ಷಣದವರೆಗೂ ನೊಂದವರೊಂದಿಗೆ ಬದುಕಿದವನು. ಅಂದರೆ, ನೆಲದ ಕಾರುಣ್ಯವನ್ನು ಕರುಳೊಳಗಿಟ್ಟುಕೊಂಡು ಉಂಡ ತುತ್ತಿಗೆ ಲೆಕ್ಕ ಬರೆದಿಕ್ಕುವ ಹಾಗೂ ಈ ನೆಲದ ದನಿಗೆ ಮೈಯ್ಯಾನಿಸಿ ಬದುಕುವ ಕಸುವು ಕಟ್ಟಿಕೊಂಡವನು. ಬಿಎ ಓದುವಾಗಿಂದ ಹೋರಾಟದ ಬದುಕಿಗೆ ಬಿದ್ದು, ದಲಿತ, ರೈತ, ಮಹಿಳಾ, ಕಾರ್ಮಿಕ, ಅಲ್ಪಸಂಖ್ಯಾತ ಹೋರಾಟಗಳಲ್ಲಿ ಕಂಠಮಟ್ಟ ಕೆಲಸ ಮಾಡಿ ಹೆಸರಿಗೆ ಹಾತೊರೆಯದೆ, ಉಸಿರಿಗೆ ಅರ್ಥ ತಂದವನು. ದಲಿತ- ದಮನಿತರ ಹೋರಾಟ ಕುರಿತ ನಿಖರ ತಿಳಿವಳಿಕೆ, ಬಾಬಾಸಾಹೇಬ್ ಅಂಬೇಡ್ಕರರ ನೋಟಕ್ರಮದ ಆಲೋಚನಾ ವಿಧಾನ ತ್ರಿಮೂರ್ತಿಯನ್ನು ಕೊಂಚ ನಿಷ್ಠುರ ವ್ಯಕ್ತಿಯನ್ನಾಗಿ ರೂಪಿಸಿದ್ದವು. ತನ್ನ ಸುತ್ತಲಿನ ಎಲ್ಲಾ ವಿದ್ಯಮಾನಗಳಿಗೆ ಸಾವಧಾನವಾಗಿ ಸ್ಪಂದಿಸುತ್ತಿದ್ದುದಲ್ಲದೆ, ಕಾರ್ಯಪ್ರವೃತ್ತಿಯಿಂದ ವರ್ತಿಸುವ ಬದ್ಧತೆಯನ್ನು ರೂಢಿಸಿಕೊಂಡಿದ್ದವನು. ಹಲವರಂತೆ ಹಲವು ರೀತಿಯಲ್ಲಿ ಮಾತನಾಡಿ ಮುಗಿಸದೆ, ಮುಂದೆ ಮಾಡಬೇಕಾದ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿ ಸಂಬಂಧಪಟ್ಟವರ ಮುಂದೆ ಮಂಡಿಸಿ ತನ್ನ ಪಾಲಿನ ಕರ್ತವ್ಯಕ್ಕಾಗಿ ಕಾಯುತ್ತಿದ್ದವನು.

ವಿದ್ಯಾರ್ಥಿ ದೆಸೆಯಲ್ಲಿ ಕರ್ನಾಟಕ ವಿಮೋಚನಾ ರಂಗದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ತ್ರಿಮೂರ್ತಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಓದಿದವನು. ತನ್ನ ಊರಿನ ಆಸ್ತಿ, ಜಾತಿಗಳ ಪ್ರಭಾವಗಳನ್ನು ಕಡೆಗಣಿಸಿ ನೊಂದವರ ಜೊತೆಯಲ್ಲಿ ಹೆಜ್ಜೆ ಹಾಕಿದ್ದಲ್ಲದೆ, ದನಿಯಿಲ್ಲದವರ ದನಿಯಾಗಲು ಹಾತೊರೆಯುತ್ತಿದ್ದನು. ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರೂಪಿಸಿದ ಎಲ್ಲಾ ಹೋರಾಟಗಳ ಜೊತೆಗೇ ಸಾಗಿದ ತ್ರಿಮೂರ್ತಿ, ಅಂಬೇಡ್ಕರ್ ಓದು, ಸಂವಿಧಾನದ ತಿಳಿವಳಿಕೆ, ಕನ್ನಡ ಸಾಹಿತ್ಯ ಮೊದಲಾದ ವಿಷಯಗಳ ಕುರಿತು ಆಳವಾಗಿ ಅಧ್ಯಯನಕ್ಕೆ ತೊಡಗಿದ್ದವನು.

ಇಷ್ಟೆಲ್ಲಾ ಸಹಜ ಹೋರಾಟಗಾರನಂತೆ ಬದುಕು ಸಾಗಿಸುತ್ತಿದ್ದ ತ್ರಿಮೂರ್ತಿ ಯಾರೊಟ್ಟಿಗೂ ತನ್ನ ಮನಸ್ಸಿನ ದುಗುಡಗಳನ್ನು ಹೇಳಿಕೊಳ್ಳುತ್ತಿರಲಿಲ್ಲ. ಸದಾ ಅಂತರ್ಮುಖಿಯಾಗಿದ್ದವನು ಕಳೆದ ಹತ್ತು ವರ್ಷಗಳಲ್ಲಿ ಹಲವು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದ್ದ. ಪ್ರೇಮ ಪದ್ಯಗಳನ್ನೂ ಬರೆಯಲು ಪ್ರಾರಂಭಿಸಿ ನಮಗೆಲ್ಲಾ ಆಶ್ಚರ್ಯ ಉಂಟುಮಾಡಿದ್ದ.

“ಜಿಂಕೆಯ ಕಣ್ಣೆಂದೆ ಅಲ್ಲವೆಂದಳು
ಹವಳದ ತುಟಿಯೆಂದೆ ಸುಳ್ಳೆಂದಳು
ಸೋತು ನಿಂತವನ ನೋಡಿ
ಮಾತಾಡು ತಲೆಯಿಂದಲ್ಲ
ಹೃದಯದಿಂದ ಎಂದಳು”

– ಈ ಪದ್ಯ ತ್ರಿಮೂರ್ತಿ ತನ್ನೊಳಗಿನ ಗಂಡುಪ್ರಜ್ಞೆಯನ್ನು ಕೊಂದುಕೊಂಡು ಮನುಷ್ಯನಾಗುವ ಪ್ರಯೋಗ. ಗಂಡು ಎನ್ನುವುದು ಒಂದು ರೋಗವೆಂದೇ ನಂಬಿದ್ದ ಅವನು ’ಪ್ರೇಮ’ ಗಂಡನ್ನು ಮನುಷ್ಯತ್ವದ ಕಡೆಗೆ ಕೊಂಡೊಯ್ಯುತ್ತದೆ ಎಂಬುದನ್ನು ಅರಿತಿದ್ದ. ಇದ್ದಕ್ಕಿದ್ದಂತೆ ಇಂಥಾ ಪದ್ಯಗಳನ್ನು ವಾಟ್ಸಪ್ ಮಾಡಿ ಅಚ್ಚರಿ ಮೂಡಿಸುತ್ತಿದ್ದ.

“ನೂರಾರು ಮನಸುಗಳು ದುಡಿತಾವೆ ನೋವಿಗೆ ಮದ್ದನ್ನು ಅರಿತಾವೆ” ಎಂದು ಬರೆದ. ದುಡಿಮೆ ಮತ್ತು ಅರಿಮೆ ಅಥವಾ ಅರಿಯುವಿಕೆಯನ್ನು ಕೂಡಿಸಿ ಪದ್ಯ ಕಟ್ಟಲು ಪ್ರಯತ್ನಿಸಿದ್ದ ತ್ರಿಮೂರ್ತಿಗೆ ನಿಸ್ಸಂದೇಹವಾಗಿ ಕನ್ನಡ ಕಾವ್ಯದ ಆಳದ ತಿಳಿವಳಿಕೆಯಿತ್ತು.

“ಹಿಡಿ ಅಕ್ಕಿ ತಿನ್ನುವಾ ಬಾಯಿದೋ
ದುಡಿದುಣ್ಣಲು ಬಯಸುತಿದೆ.
ನನ್ನದಲ್ಲದ್ದು ನನಗೆ
ಕಾಲಕಸ ತಿಳಿದಿರಲಿ”

ಮೇಲುನೋಟಕ್ಕೆ ಹೊಸ ಕವಿಯ ಆರಂಭದ ನುಡಿಗಳಂತೆ ಕಾಣುವ ಈ ಪದ್ಯಗಳು ಭಾರತದಂತಹ ಪರಿಸರದಲ್ಲಿ ಬದುಕುವ ವ್ಯಕ್ತಿಗಳ ಹೃದಯದ ಎಕ್ಸರೇಗಳಂತೆ ಭಾಸವಾಗುತ್ತವೆ. ತ್ರಿಮೂರ್ತಿ ಅಂತಹ ಎಲ್ಲಾ ಹೃದಯಗಳ ಎಕ್ಸರೇ ಆಗಿದ್ದವನು.

ಹೋಗುವ ಮೊದಲು ನಾಲ್ಕೈದು ತಿಂಗಳು ಕಾಣೆಯಾಗಿದ್ದವನು ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಒಕ್ಕೂಟ ಹಮ್ಮಿಕೊಂಡಿದ್ದ ’ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ’ದ ಪ್ರಚಾರಕ್ಕಾಗಿ ನಾವು ಮಾಡಿದ್ದ ವಾಟ್ಸಾಪ್ ಗ್ರೂಪಿಗೆ ಬಂದ. ಬಂದವನೇ ನಮ್ಮೆಲ್ಲರ ಕೆಲಸಗಳನ್ನು ಒಬ್ಬನೇ ಮಾಡಿದ. ಸೋಷಿಯಲ್ ಮೀಡಿಯಾಗೆಂದು ತಂಡ ಸಿದ್ಧಪಡಿಸಿದ ಪೋಸ್ಟರ್ ಮತ್ತು ವಿಡಿಯೋಗಳನ್ನು ಹಗಲಿರುಳೆನ್ನದೆ, ಯಾವುದೇ ಬೇಸರವಿಲ್ಲದೆ ಶೇರ್ ಮಾಡಿದ. ನಾವು ಮಾಡಿದ ವಾಟ್ಸಪ್ ಗ್ರೂಪುಗಳಲ್ಲಿ ಯಾರಾದರೂ ಪ್ರಶ್ನೆಗಳನ್ನು ಎತ್ತಿದರೆ ನಮ್ಮ ಗಮನಕ್ಕೆ ತಂದು ಅದಕ್ಕೆ ತಕ್ಷಣವೇ ಉತ್ತರಿಸುವಂತೆ ಒತ್ತಡ ಹಾಕುತ್ತಿದ್ದ. ಫೇಸ್‌ಬುಕ್ಕಿನಲ್ಲಿ ಕೆಲವರು ಸಮಾವೇಶದ ವಿರುದ್ಧ ಬರೆದಾಗ ನೊಂದುಕೊಂಡು ಅವರನ್ನೆಲ್ಲಾ ಕರೆದು ಮಾತಾಡೋಣ ಎಂದ. ಸಮಾವೇಶದ ದಿನ ವಿಮಾನನಿಲ್ದಾಣದಿಂದ ರಮಾಬಾಯಿಯವರನ್ನು ಕರೆತರುವ ಹಾಗು ಕರೆದುಕೊಂಡು ಹೋಗಿ ಬಿಡುವ ಕೆಲಸವಹಿಸಿಕೊಂಡ. ಆ ಕೆಲಸಗಳ ನಡುವೆ ಬಾಬಾಸಾಹೇಬರ ಫೋಟೋ ಇದ್ದ ಅಂಗಿ ಹಾಕಿಕೊಂಡು ಬಿಸಿಲಲ್ಲಿ ಬೇಯುತ್ತಾ ಸಮಾವೇಶದ ಕಂಟೆಂಟ್ ಕೆಲಸ ನಿರ್ವಹಿಸಿದ.

ನಾವೆಲ್ಲಾ ಮಾತನಾಡುವ ಆದರ್ಶದಂತೆಯೇ ಬದುಕಲು ಪ್ರಯತ್ನಸುತ್ತಿದ್ದ ತ್ರಿಮೂರ್ತಿ ಅದೆಲ್ಲಿ ಸೋತ ಎಂದು ಯೋಚಿಸಲುತೊಡಗಿದರೆ ಉತ್ತರ ಸುಲಭವಲ್ಲ. ಅಥವಾ ಸಾವನ್ನು ಸೋಲು ಎಂದುಕೊಳ್ಳುವ ನಮಗೆ ಸಾಮಾಜಿಕ ಬದುಕನ್ನು, ವೈಯಕ್ತಿಕ ಬದುಕನ್ನು ಅರ್ಥಮಾಡಿಕೊಳ್ಳುವ ತರಬೇತಿಯ ಕೊರತೆಯಿರಬಹುದು. ನೆನ್ನೆ ಮೊನ್ನೆ ನಮ್ಮ ಜೊತೆ ಇದ್ದ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಕಣ್ಮರೆಯಾದನಲ್ಲಾ ಎಂಬ ಆಘಾತ ನಮ್ಮೊಳಗೆ ಅಸಂಬದ್ಧ ತಾತ್ವಿಕ ಜಿಜ್ಞಾಸೆಗಳನ್ನು ಹುಟ್ಟುಹಾಕಬಹುದು. ಅಥವಾ ಸಾವು ಸುಲಭ ಬದುಕು ಕಷ್ಟ ಎಂಬ ಷರಾ ಬರೆದು ’ಈ ಕೆಟ್ಟ ಜಗತ್ತಿನಲ್ಲಿ ಇದ್ದು ನೋಯುವುದಕ್ಕಿಂತ ಎದ್ದು ಹೋಗುವುದೇ ಮೇಲು’ ಎಂದುಕೊಂಡು ಬದುಕಿಸಿಕೊಳ್ಳಲಾಗದ ನಮ್ಮ ಅಸಹಾಯಕತೆಗೆ ತಾತ್ವಿಕತೆಯ ಮಾಸ್ಕ್ ಹಾಕಿಬಿಡಬಹುದು. ಆದರೆ, ಇದರೆಲ್ಲದರಾಚೆಗೆ ತ್ರಿಮೂರ್ತಿ ಇಲ್ಲ ಎಂಬ ಸತ್ಯ ಅದೆಷ್ಟು ಭಯಂಕರವಾದ ಸತ್ಯವನ್ನು ನಮ್ಮೆದೆಗೆ ಎಸೆಯುತ್ತದೆಂದರೆ, ನಮ್ಮಗಳ ಜೀವಂತಿಕೆಯ ಮೇಲೆ ಗುಮಾನಿ ಹುಟ್ಟಿಸುವಷ್ಟು.

ದಶಕದ ಹಿಂದೆ ಗೆಳೆಯ ಪ್ರಶಾಂತ ಇಂಥದ್ದೇ ನಿರ್ಧಾರ ಮಾಡಿದಾಗ, ಗೆಳೆಯ ಎನ್.ಕೆ.ಹನುಮಂತಯ್ಯ ಹೀಗೇ ಎದ್ದು ಹೋದಾಗ ಅಕ್ಷರಶಃ ಅದುರಿಹೋಗಿದ್ದ ನನ್ನ ದೇಹ ಮತ್ತು ಮನಸ್ಸು ತ್ರಿಮೂರ್ತಿಯ ಸಾವಿನಿಂದ ಜಡ್ಡುಗಟ್ಟಿದಂತೆನಿಸಿ ಭಯವಾಗುತ್ತದೆ. ಅವನ ಗೈರುಹಾಜರಿಯನ್ನು ನನ್ನ ಸುತ್ತಲಿನ ಯಾರಿಗೂ ಸಹಿಸಲಾಗುತ್ತಿಲ್ಲ. ದಲಿತ ಸಂಘಟನೆಗಳ ಒಗ್ಗಟ್ಟು, ಕೋಮುವಾದದ ವಿರುದ್ಧದ ಜನರ ಸಿಟ್ಟು ಅವನನ್ನು ಉಳಿಸಬೇಕಿತ್ತು. ಅದು ಅವನ ಕನಸಾಗಿತ್ತು. ಹೊರಗೆ ಕನ್ನಡಿಯ ಹೊತ್ತು ಓಡಾಡುತ್ತಿದ್ದ ತ್ರಿಮೂರ್ತಿ ಆ ಕನ್ನಡಿಯೊಳಗೇ ಲಯವಾಗಿಬಿಟ್ಟ. ಆ ಕನ್ನಡಿಗಳೀಗ ನಮ್ಮನ್ನು ಪ್ರತಿಬಿಂಬಿಸುತ್ತಿವೆ. ಮತ್ತೆ ಅವನೇ ಬರೆದ ಸಾಲುಗಳು ಚುಚ್ಚುತ್ತಿವೆ:

“ಆ ವಾದ ಈ ವಾದ
ಸಿದ್ಧಾಂತ ಮುಗ್ದಾಂತ ಅಂತಾವೆ
ಮಕ್ ಮಕ ನೋಡ್ಕಂಡು
ಉರ್ಕಂತಾವೆ..
ಬೆನ್ ಬೆನ್‌ಗೆ ಚೂರಿನಾ
ಇರ್ಕಂತಾವೆ…”

“ಸತ್ಯವ ಹೇಳಿ ಸಿಕ್ಕಿಬಿದ್ದಿದ್ದೇನೆ
ಮನದೊಳಗೆ..
ಮುದವಿದೆ, ಭೀತಿಯಿದೆ
ಜಗದ ಹಳದಿಗಣ್ಣುಗಳ ಬಗ್ಗೆ ಭಯವಿದೆ
ಮನಸಿನಾಟವ ಹೃದಯ ಒಪ್ಪುತ್ತಿಲ್ಲ
ನಿಜವೇನೆಂದು ತಿಳಿಯುತ್ತಿಲ್ಲ”

ಹುಲಿಕುಂಟೆ ಮೂರ್ತಿ
ಕನ್ನಡ ಪಾಧ್ಯಾಪಕರು, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...