Homeಮುಖಪುಟಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪ; ನಿಬಂಧನೆಗಳ ತಿದ್ದುಪಡಿಗೆ ಚಿಂತನೆ

ಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪ; ನಿಬಂಧನೆಗಳ ತಿದ್ದುಪಡಿಗೆ ಚಿಂತನೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ’ಯನ್ನು ಬದಲಿಸಿ ಸೋಮವಾರದಿಂದ ದೇಶದಲ್ಲಿ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹಲವು ಸಲಹೆಗಳನ್ನು ಕಳುಹಿಸಿದ್ದಾರೆ. ಇದಲ್ಲದೆ, ರಾಜ್ಯ ಮಟ್ಟದಲ್ಲಿ ಕಾನೂನುಗಳ ನಿಬಂಧನೆಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ಮೂರು ಕಾನೂನುಗಳ (ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್) ಸಲಹೆ ಮತ್ತು ವಿಶ್ಲೇಷಣೆಯು ಕರ್ನಾಟಕ ಸರ್ಕಾರವು ರಚಿಸಿರುವ ತಜ್ಞರ ಸಮಿತಿಯ ಪರಿಶೀಲನಾ ವರದಿಯ ಫಲಿತಾಂಶವಾಗಿದೆ.

ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಸಲಹೆಗಳು:

1. ಸಂವಿಧಾನದ ಆರ್ಟಿಕಲ್ 348 ಆದೇಶದ ಪ್ರಕಾರ, ಎಲ್ಲ ಕಾನೂನುಗಳ ಹೆಸರುಗಳು ಇಂಗ್ಲಿಷ್‌ನಲ್ಲಿರಬೇಕು. ಆದರೆ, ಕಾನೂನುಗಳ ಹೆಸರುಗಳು ಹಿಂದಿಯಲ್ಲಿರುವುದರಿಂದ ಈ ಬೇಡಿಕೆ ಇಡಲಾಗಿದೆ.

2. ಎಲ್ಲ ಮೂರು ಕಾನೂನುಗಳಲ್ಲಿ, ‘ಐಪಿಸಿ’ಯಲ್ಲಿನ ಬಹುಪಾಲು ನಿಬಂಧನೆಗಳನ್ನು ಉಳಿಸಿಕೊಳ್ಳಲಾಗಿದೆ ಮತ್ತು ಸಂಖ್ಯೆಗಳನ್ನು ಮರುನಿಗದಿ ಮಾಡಲಾಗಿದೆ. ಅನಗತ್ಯ ಗೊಂದಲಗಳನ್ನು ತಪ್ಪಿಸಲು, ಕಾನೂನು ನಿರಂತರತೆಯನ್ನು ಕಾಪಾಡಲು ಮತ್ತು ಹೊಸ ಚೌಕಟ್ಟಿಗೆ ಸುಗಮ ಸ್ಥಿತ್ಯಂತರವನ್ನು ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಸಂಖ್ಯೆಗಳು ಮತ್ತು ಐಪಿಸಿಯಲ್ಲಿನ ವಿಭಾಗಗಳ ಯೋಜನೆಯನ್ನು ಉಳಿಸಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ.

3. ಮೂರು ಹೊಸ ಕ್ರಿಮಿನಲ್ ನ್ಯಾಯ ಕಾನೂನುಗಳಲ್ಲಿ ಹಳೆಯ ನಿಬಂಧನೆಗಳ ಬಹುಪಾಲು ಉಳಿಸಿಕೊಂಡಿದೆ ಮತ್ತು ಕೆಲವೇ ನಿಬಂಧನೆಗಳನ್ನು ಪರಿಚಯಿಸಲಾಗಿದೆ, ಹೊಸ ಕಾಯಿದೆಗಳನ್ನು ಜಾರಿಗೊಳಿಸುವ ಬದಲು ಸೂಕ್ತ ತಿದ್ದುಪಡಿಗಳ ಮೂಲಕ ಉದ್ದೇಶವನ್ನು ಸಾಧಿಸಬಹುದು ಎಂದು ಸಲಹೆ ನೀಡಿದೆ.

ಸಾಂವಿಧಾನಿಕ ಹಕ್ಕು ಬಳಸಿಕೊಂಡಿ ತಿದ್ದುಪಡಿಗೆ ಚಿಂತನೆ

ಈ ಬೆಳವಣಿಗೆಗಳ ನಡುವೆ, ಸಿದ್ದರಾಮಯ್ಯ ನೇತೃತ್ವದ ಆಡಳಿತವು ಪ್ರಸ್ತುತ ಹೊಸ ರೂಪದಲ್ಲಿರುವ ಕಾನೂನನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕಾರಣ, ಭಾರತೀಯ ನ್ಯಾಯ ಸಂಹಿತೆಯನ್ನು ತಿದ್ದುಪಡಿ ಮಾಡಲು ಚಿಂತನೆ ನಡೆಸುತ್ತಿದೆ.

ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹವನ್ನು ಅಪರಾಧವೆಂದು ಪರಿಗಣಿಸುವುದು, ಆದರೆ ಆತ್ಮಹತ್ಯೆ ಅಲ್ಲದಂತಹ ನಿಬಂಧನೆಗಳನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಕಳೆದ ವರ್ಷ ಕರ್ನಾಟಕ ಸರ್ಕಾರ ಅಮಿತ್ ಶಾ ಅವರಿಗೆ 23 ಸಲಹೆಗಳನ್ನು ಕಳುಹಿಸಿತ್ತು. ಆದಾಗ್ಯೂ, ಯಾವುದೇ ಶಿಫಾರಸುಗಳನ್ನು ಪರಿಗಣನೆಗೆ ತೆಗೆದುಕೊಂಡು ಹೊಸ ಕಾನೂನುಗಳಲ್ಲಿ ಅಳವಡಿಸಲಾಗಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಮುಂದಿನ ನಡೆ ಕುರಿತು ಸಿದ್ದರಾಮಯ್ಯ ಮತ್ತು ರಾಜ್ಯ ಸಚಿವ ಸಂಪುಟ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಈ ಕುರಿತು ಮಾತನಾಡಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, “ಈ ಹಿಂದೆ ಭಾರತದ ಕೇಂದ್ರ ಗೃಹ ಸಚಿವರು ಕೇಳಿದಾಗ ಕರ್ನಾಟಕ ಸರ್ಕಾರ ಕೆಲವು ಶಿಫಾರಸುಗಳನ್ನು ಮಾಡಿತ್ತು. ನಮ್ಮ ಮುಖ್ಯಮಂತ್ರಿಗಳು ಸುಮಾರು 23 ಸಲಹೆಗಳನ್ನು ಬರೆದಿದ್ದಾರೆ. ಆದರೆ, ಕೇಂದ್ರವು ಆ ಸಲಹೆಗಳನ್ನು ನಿರ್ಲಕ್ಷಿಸಿದೆ, ಅದಕ್ಕಾಗಿಯೇ ನಾವು ನಮ್ಮ ಕಾರ್ಯಾಚರಣೆಯ ಪ್ರದೇಶ ಅಥವಾ ನ್ಯಾಯವ್ಯಾಪ್ತಿಗೆ ಸಂಬಂಧಿಸಿದಂತೆ ತಿದ್ದುಪಡಿಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ, ಇದು 7 ನೇ ವಿಧಿ, ಪಟ್ಟಿ 3 ರ ಅಡಿಯಲ್ಲಿ ನಾವು ತಿದ್ದುಪಡಿಗಳನ್ನು ಮಾಡುತ್ತೇವೆ. ನಮ್ಮ ಸರ್ಕಾರವು ಜುಲೈ 4 ರಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ಕಾನೂನುಗಳಿಗೆ ತಿದ್ದುಪಡಿಗಳನ್ನು ತರಲು ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಈ ಅಧಿವೇಶನದಲ್ಲಿಯೇ ಅವುಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ಎಚ್‌ಕೆ ಪಾಟೀಲ್ ಅವರು ನಿಬಂಧನೆಗಳನ್ನು ಪ್ರಶ್ನಿಸಿದ್ದು, 90 ದಿನಗಳ ಪೊಲೀಸ್ ಕಸ್ಟಡಿಯು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದರು.

90 ದಿನ ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ, ಇಷ್ಟು ದಿನ ಪೊಲೀಸ್ ಕಸ್ಟಡಿಯಲ್ಲಿ ಇರೋದು ಹೇಗೆ? ಇದು ಮಾನವ ಹಕ್ಕುಗಳ ಉಲ್ಲಂಘನೆಯಲ್ಲವೇ? ನ್ಯಾಯಾಂಗ ಹಸ್ತಕ್ಷೇಪವಿಲ್ಲದೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಪೊಲೀಸರಿಗೆ ನೀಡಿದ್ದಾರೆ; ಇದು ಪ್ರಜಾಸತ್ತಾತ್ಮಕವಲ್ಲ. ಈ ಕಾನೂನು ನ್ಯಾಯಾಂಗಕ್ಕೆ ಮತ್ತು ರಾಷ್ಟ್ರಗೀತೆ, ರಾಷ್ಟ್ರಪಿತ ಅಥವಾ ರಾಷ್ಟ್ರಧ್ವಜವನ್ನು ಗೌರವಿಸುವುದಿಲ್ಲ ಎಂದು ಅವರು ಹೇಳಿದರು.

ಸಂವಿಧಾನದ ಪ್ರಕಾರ, ಅಂತಹ ಕಾಯಿದೆಗಳು, ವಿಶೇಷವಾಗಿ ಪೋಷಕ ಕಾಯಿದೆಗಳು “ಇಂಗ್ಲಿಷ್‌ನಲ್ಲಿರಬೇಕು” ಎಂದು ಅವರು ಸೂಚಿಸಿದರು.

“ನಾವು ತಿದ್ದುಪಡಿಗಳನ್ನು ಮಾಡಲು ಗಂಭೀರವಾಗಿ ಯೋಚಿಸುತ್ತಿದ್ದೇವೆ. ಈ ಕಾನೂನುಗಳನ್ನು ಹಿಂಪಡೆಯಲು, ಬದಲಾವಣೆಗಳನ್ನು ಮಾಡಲು ಮತ್ತು ಅವುಗಳನ್ನು ಮತ್ತೆ ಜಾರಿಗೆ ತರಲು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ; ‘ನಾವು ಸತ್ಯದೊಂದಿಗೆ ನಿಂತು, ಅಹಿಂಸಾ ಮಾರ್ಗ ಅನುಸರಿಸಬೇಕು’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...