Homeಮುಖಪುಟಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪ; ನಿಬಂಧನೆಗಳ ತಿದ್ದುಪಡಿಗೆ ಚಿಂತನೆ

ಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪ; ನಿಬಂಧನೆಗಳ ತಿದ್ದುಪಡಿಗೆ ಚಿಂತನೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ’ಯನ್ನು ಬದಲಿಸಿ ಸೋಮವಾರದಿಂದ ದೇಶದಲ್ಲಿ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹಲವು ಸಲಹೆಗಳನ್ನು ಕಳುಹಿಸಿದ್ದಾರೆ. ಇದಲ್ಲದೆ, ರಾಜ್ಯ ಮಟ್ಟದಲ್ಲಿ ಕಾನೂನುಗಳ ನಿಬಂಧನೆಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ಮೂರು ಕಾನೂನುಗಳ (ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್) ಸಲಹೆ ಮತ್ತು ವಿಶ್ಲೇಷಣೆಯು ಕರ್ನಾಟಕ ಸರ್ಕಾರವು ರಚಿಸಿರುವ ತಜ್ಞರ ಸಮಿತಿಯ ಪರಿಶೀಲನಾ ವರದಿಯ ಫಲಿತಾಂಶವಾಗಿದೆ.

ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಸಲಹೆಗಳು:

1. ಸಂವಿಧಾನದ ಆರ್ಟಿಕಲ್ 348 ಆದೇಶದ ಪ್ರಕಾರ, ಎಲ್ಲ ಕಾನೂನುಗಳ ಹೆಸರುಗಳು ಇಂಗ್ಲಿಷ್‌ನಲ್ಲಿರಬೇಕು. ಆದರೆ, ಕಾನೂನುಗಳ ಹೆಸರುಗಳು ಹಿಂದಿಯಲ್ಲಿರುವುದರಿಂದ ಈ ಬೇಡಿಕೆ ಇಡಲಾಗಿದೆ.

2. ಎಲ್ಲ ಮೂರು ಕಾನೂನುಗಳಲ್ಲಿ, ‘ಐಪಿಸಿ’ಯಲ್ಲಿನ ಬಹುಪಾಲು ನಿಬಂಧನೆಗಳನ್ನು ಉಳಿಸಿಕೊಳ್ಳಲಾಗಿದೆ ಮತ್ತು ಸಂಖ್ಯೆಗಳನ್ನು ಮರುನಿಗದಿ ಮಾಡಲಾಗಿದೆ. ಅನಗತ್ಯ ಗೊಂದಲಗಳನ್ನು ತಪ್ಪಿಸಲು, ಕಾನೂನು ನಿರಂತರತೆಯನ್ನು ಕಾಪಾಡಲು ಮತ್ತು ಹೊಸ ಚೌಕಟ್ಟಿಗೆ ಸುಗಮ ಸ್ಥಿತ್ಯಂತರವನ್ನು ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಸಂಖ್ಯೆಗಳು ಮತ್ತು ಐಪಿಸಿಯಲ್ಲಿನ ವಿಭಾಗಗಳ ಯೋಜನೆಯನ್ನು ಉಳಿಸಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ.

3. ಮೂರು ಹೊಸ ಕ್ರಿಮಿನಲ್ ನ್ಯಾಯ ಕಾನೂನುಗಳಲ್ಲಿ ಹಳೆಯ ನಿಬಂಧನೆಗಳ ಬಹುಪಾಲು ಉಳಿಸಿಕೊಂಡಿದೆ ಮತ್ತು ಕೆಲವೇ ನಿಬಂಧನೆಗಳನ್ನು ಪರಿಚಯಿಸಲಾಗಿದೆ, ಹೊಸ ಕಾಯಿದೆಗಳನ್ನು ಜಾರಿಗೊಳಿಸುವ ಬದಲು ಸೂಕ್ತ ತಿದ್ದುಪಡಿಗಳ ಮೂಲಕ ಉದ್ದೇಶವನ್ನು ಸಾಧಿಸಬಹುದು ಎಂದು ಸಲಹೆ ನೀಡಿದೆ.

ಸಾಂವಿಧಾನಿಕ ಹಕ್ಕು ಬಳಸಿಕೊಂಡಿ ತಿದ್ದುಪಡಿಗೆ ಚಿಂತನೆ

ಈ ಬೆಳವಣಿಗೆಗಳ ನಡುವೆ, ಸಿದ್ದರಾಮಯ್ಯ ನೇತೃತ್ವದ ಆಡಳಿತವು ಪ್ರಸ್ತುತ ಹೊಸ ರೂಪದಲ್ಲಿರುವ ಕಾನೂನನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕಾರಣ, ಭಾರತೀಯ ನ್ಯಾಯ ಸಂಹಿತೆಯನ್ನು ತಿದ್ದುಪಡಿ ಮಾಡಲು ಚಿಂತನೆ ನಡೆಸುತ್ತಿದೆ.

ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹವನ್ನು ಅಪರಾಧವೆಂದು ಪರಿಗಣಿಸುವುದು, ಆದರೆ ಆತ್ಮಹತ್ಯೆ ಅಲ್ಲದಂತಹ ನಿಬಂಧನೆಗಳನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಕಳೆದ ವರ್ಷ ಕರ್ನಾಟಕ ಸರ್ಕಾರ ಅಮಿತ್ ಶಾ ಅವರಿಗೆ 23 ಸಲಹೆಗಳನ್ನು ಕಳುಹಿಸಿತ್ತು. ಆದಾಗ್ಯೂ, ಯಾವುದೇ ಶಿಫಾರಸುಗಳನ್ನು ಪರಿಗಣನೆಗೆ ತೆಗೆದುಕೊಂಡು ಹೊಸ ಕಾನೂನುಗಳಲ್ಲಿ ಅಳವಡಿಸಲಾಗಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಮುಂದಿನ ನಡೆ ಕುರಿತು ಸಿದ್ದರಾಮಯ್ಯ ಮತ್ತು ರಾಜ್ಯ ಸಚಿವ ಸಂಪುಟ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಈ ಕುರಿತು ಮಾತನಾಡಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, “ಈ ಹಿಂದೆ ಭಾರತದ ಕೇಂದ್ರ ಗೃಹ ಸಚಿವರು ಕೇಳಿದಾಗ ಕರ್ನಾಟಕ ಸರ್ಕಾರ ಕೆಲವು ಶಿಫಾರಸುಗಳನ್ನು ಮಾಡಿತ್ತು. ನಮ್ಮ ಮುಖ್ಯಮಂತ್ರಿಗಳು ಸುಮಾರು 23 ಸಲಹೆಗಳನ್ನು ಬರೆದಿದ್ದಾರೆ. ಆದರೆ, ಕೇಂದ್ರವು ಆ ಸಲಹೆಗಳನ್ನು ನಿರ್ಲಕ್ಷಿಸಿದೆ, ಅದಕ್ಕಾಗಿಯೇ ನಾವು ನಮ್ಮ ಕಾರ್ಯಾಚರಣೆಯ ಪ್ರದೇಶ ಅಥವಾ ನ್ಯಾಯವ್ಯಾಪ್ತಿಗೆ ಸಂಬಂಧಿಸಿದಂತೆ ತಿದ್ದುಪಡಿಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ, ಇದು 7 ನೇ ವಿಧಿ, ಪಟ್ಟಿ 3 ರ ಅಡಿಯಲ್ಲಿ ನಾವು ತಿದ್ದುಪಡಿಗಳನ್ನು ಮಾಡುತ್ತೇವೆ. ನಮ್ಮ ಸರ್ಕಾರವು ಜುಲೈ 4 ರಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ಕಾನೂನುಗಳಿಗೆ ತಿದ್ದುಪಡಿಗಳನ್ನು ತರಲು ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಈ ಅಧಿವೇಶನದಲ್ಲಿಯೇ ಅವುಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ಎಚ್‌ಕೆ ಪಾಟೀಲ್ ಅವರು ನಿಬಂಧನೆಗಳನ್ನು ಪ್ರಶ್ನಿಸಿದ್ದು, 90 ದಿನಗಳ ಪೊಲೀಸ್ ಕಸ್ಟಡಿಯು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದರು.

90 ದಿನ ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ, ಇಷ್ಟು ದಿನ ಪೊಲೀಸ್ ಕಸ್ಟಡಿಯಲ್ಲಿ ಇರೋದು ಹೇಗೆ? ಇದು ಮಾನವ ಹಕ್ಕುಗಳ ಉಲ್ಲಂಘನೆಯಲ್ಲವೇ? ನ್ಯಾಯಾಂಗ ಹಸ್ತಕ್ಷೇಪವಿಲ್ಲದೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಪೊಲೀಸರಿಗೆ ನೀಡಿದ್ದಾರೆ; ಇದು ಪ್ರಜಾಸತ್ತಾತ್ಮಕವಲ್ಲ. ಈ ಕಾನೂನು ನ್ಯಾಯಾಂಗಕ್ಕೆ ಮತ್ತು ರಾಷ್ಟ್ರಗೀತೆ, ರಾಷ್ಟ್ರಪಿತ ಅಥವಾ ರಾಷ್ಟ್ರಧ್ವಜವನ್ನು ಗೌರವಿಸುವುದಿಲ್ಲ ಎಂದು ಅವರು ಹೇಳಿದರು.

ಸಂವಿಧಾನದ ಪ್ರಕಾರ, ಅಂತಹ ಕಾಯಿದೆಗಳು, ವಿಶೇಷವಾಗಿ ಪೋಷಕ ಕಾಯಿದೆಗಳು “ಇಂಗ್ಲಿಷ್‌ನಲ್ಲಿರಬೇಕು” ಎಂದು ಅವರು ಸೂಚಿಸಿದರು.

“ನಾವು ತಿದ್ದುಪಡಿಗಳನ್ನು ಮಾಡಲು ಗಂಭೀರವಾಗಿ ಯೋಚಿಸುತ್ತಿದ್ದೇವೆ. ಈ ಕಾನೂನುಗಳನ್ನು ಹಿಂಪಡೆಯಲು, ಬದಲಾವಣೆಗಳನ್ನು ಮಾಡಲು ಮತ್ತು ಅವುಗಳನ್ನು ಮತ್ತೆ ಜಾರಿಗೆ ತರಲು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ; ‘ನಾವು ಸತ್ಯದೊಂದಿಗೆ ನಿಂತು, ಅಹಿಂಸಾ ಮಾರ್ಗ ಅನುಸರಿಸಬೇಕು’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...