Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...