Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...