Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...