Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...