Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...