ನೈಜ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.
It is heartening to see the positive impact made by @firefurycorps_IA
in Border areas of Eastern Ladakh in facilitating the graziers & nomads to assert their rights in traditional grazing grounds along the north bank of Pangong.
I would like to thank #IndianArmy for such strong… pic.twitter.com/yNIBatPRKE— Konchok Stanzin (@kstanzinladakh) January 30, 2024
ಎಲ್ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.
ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಕನಿಷ್ಠ ಮೂವರು ವಾಹನಗಳು ಮತ್ತು ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.
ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.
ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.
‘ಎಲ್ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.
ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್