Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...