Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...