Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....