Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...