Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...