Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...