Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...