Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...