Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...