Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...