Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...