Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...