Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...