Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...