Homeಮುಖಪುಟ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

- Advertisement -
- Advertisement -

“ಶಾಹೀನ್ ಬಾಗ್‌‌ನ ದಾದಿ” ಎಂದೆ ಪ್ರೀತಿಯಿಂದ ಕರೆಯಲ್ಪಡುವ ಸಿಎಎ ವಿರುದ್ದದ ಹೋರಾಟದ ಸ್ಪೂರ್ತಿಯಾಗಿರುವ 82 ವರ್ಷದ ಬಿಲ್ಕಿಸ್ ಬಾನು ಅವರ ಬಗ್ಗೆ ಬಾಲಿವುಡ್ ನಟಿ ಕಂಗನಾ ರಾಣಾವತ್‌ ನೀಡಿರುವ ಹೇಳಿಕೆಗೆ ಕಾನೂನು ನೋಟಿಸ್ ನೀಡಲಾಗಿದೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಇದನ್ನೂಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ವಿವಾದಾತ್ಮಕ ಟ್ವೀಟನ್ನು ಕಂಗನಾ ಈಗ ಅಳಿಸಿದ್ದು ಅದರಲ್ಲಿ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್…ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿದ್ದರು.

ಪಂಜಾಬ್‌ನ ಜಿರಾಕ್‌ಪುರ ಪಟ್ಟಣದ ವಕೀಲರು ಕಾನೂನು ನೋಟಿಸ್ ಕಳುಹಿಸಿದ್ದು, ಏಳು ದಿನಗಳ ಒಳಗಾಗಿ ಕಂಗನಾ ಅವರ ಟ್ವೀಟ್‌ಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವೃದ್ದ ಮಹಿಳೆಯೊಬ್ಬರನ್ನು ಕಂಗನಾ “ಬಿಲ್ಕಿಸ್ ದಾದಿ” ಎಂದು ತಪ್ಪಾಗಿ ಗುರುತಿಸಿದ್ದಾರೆ ಎಂದು ವಕೀಲರು ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಸ್ವತಃ ಬಿಲ್ಕಿಸ್ ಬಾನೂ ಅವರೇ ಚಿತ್ರದಲ್ಲಿರುವ ಮಹಿಳೆ ತಾನಲ್ಲ ಎಂದು ದೃಡಪಡಿಸಿದ್ದಾರೆ.

ಕಾನೂನು ನೋಟಿಸ್, “ಮಹಿಳೆಯು ನಕಲಿ ಅಲ್ಲ, ಅವರ ಹೆಸರು ಮನಿಂದರ್ ಕೌರ್ ಹಾಗೂ ಅವರು ಬಹದ್ದೂರ್ ಗಡ್ ಗ್ರಾಮಕ್ಕೆ ಸೇರಿದವರು” ಎಂದು ಹೇಳಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ಕಂಗನಾ ತನ್ನ ಟ್ವೀಟ್ ಮೂಲಕ ರೈತರ ಪ್ರತಿಭಟನೆಯನ್ನು ಅಪಹಾಸ್ಯ ಮಾಡಿದ್ದಾರೆ ಎಂದು ನೋಟಿಸ್‌‌ನಲ್ಲಿ ತಿಳಿಸಲಾಗಿದೆ. “ಈ ರೀತಿಯಾಗಿ ಟ್ವೀಟ್ ಮಾಡುವ ಮೂಲಕ, ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಜನರನ್ನು ಬಾಡಿಗೆಗೆ ತರುವ ಮೂಲಕ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆಂದು” ಎಂದು ಅದು ಹೇಳುತ್ತದೆ.

ಮಂಗಳವಾರ ಸಂಜೆ ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಲ್ಕೀಸ್ ಬಾನು ಬಂದಿದ್ದು, ಆದರೆ ಅವರನ್ನು ಪೊಲೀಸರು ಬಂಧಿಸಿದರು. “ನಾವು ರೈತರನ್ನು ಬೆಂಬಲಿಸಲು ಇಲ್ಲಿದ್ದೇವೆ. ಶಾಹೀನ್ ಬಾಗ್‌‌ನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಅವರು ನಮ್ಮನ್ನು ಬೆಂಬಲಿಸಿದರು. ಈಗ ನಾವು ಅವರಿಗಾಗಿ ಇಲ್ಲಿದ್ದೇವೆ. ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಪ್ರತಿಭಟನಾ ಸ್ಥಳದಲ್ಲಿ ಹೇಳಿದ್ದರು.

ಭಾರತದ ಹಲವಾರು ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ನಿರಂತರ ಏಳು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರು ಕೇಂದ್ರದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆ ಕೂಗುತ್ತಿದ್ದಾರೆ. ಮಂಗಳವಾರ ಕೇಂದ್ರ ಸರ್ಕಾರ ಮತ್ತು 30 ಕ್ಕೂ ಹೆಚ್ಚು ಯೂನಿಯನ್ ನಾಯಕರ ನಡುವಿನ ಮಾತುಕತೆ ಮುರಿದು ಬಿದ್ದಿದ್ದು, ನಾಳೆ ನಾಲ್ಕನೇ ಸುತ್ತಿನ ಮಾತುಕತೆಗೆ ಕೇಂದ್ರ ಕರೆ ನೀಡಿದೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...