Homeಮುಖಪುಟ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

- Advertisement -
- Advertisement -

“ಶಾಹೀನ್ ಬಾಗ್‌‌ನ ದಾದಿ” ಎಂದೆ ಪ್ರೀತಿಯಿಂದ ಕರೆಯಲ್ಪಡುವ ಸಿಎಎ ವಿರುದ್ದದ ಹೋರಾಟದ ಸ್ಪೂರ್ತಿಯಾಗಿರುವ 82 ವರ್ಷದ ಬಿಲ್ಕಿಸ್ ಬಾನು ಅವರ ಬಗ್ಗೆ ಬಾಲಿವುಡ್ ನಟಿ ಕಂಗನಾ ರಾಣಾವತ್‌ ನೀಡಿರುವ ಹೇಳಿಕೆಗೆ ಕಾನೂನು ನೋಟಿಸ್ ನೀಡಲಾಗಿದೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಇದನ್ನೂಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ವಿವಾದಾತ್ಮಕ ಟ್ವೀಟನ್ನು ಕಂಗನಾ ಈಗ ಅಳಿಸಿದ್ದು ಅದರಲ್ಲಿ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್…ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿದ್ದರು.

ಪಂಜಾಬ್‌ನ ಜಿರಾಕ್‌ಪುರ ಪಟ್ಟಣದ ವಕೀಲರು ಕಾನೂನು ನೋಟಿಸ್ ಕಳುಹಿಸಿದ್ದು, ಏಳು ದಿನಗಳ ಒಳಗಾಗಿ ಕಂಗನಾ ಅವರ ಟ್ವೀಟ್‌ಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವೃದ್ದ ಮಹಿಳೆಯೊಬ್ಬರನ್ನು ಕಂಗನಾ “ಬಿಲ್ಕಿಸ್ ದಾದಿ” ಎಂದು ತಪ್ಪಾಗಿ ಗುರುತಿಸಿದ್ದಾರೆ ಎಂದು ವಕೀಲರು ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಸ್ವತಃ ಬಿಲ್ಕಿಸ್ ಬಾನೂ ಅವರೇ ಚಿತ್ರದಲ್ಲಿರುವ ಮಹಿಳೆ ತಾನಲ್ಲ ಎಂದು ದೃಡಪಡಿಸಿದ್ದಾರೆ.

ಕಾನೂನು ನೋಟಿಸ್, “ಮಹಿಳೆಯು ನಕಲಿ ಅಲ್ಲ, ಅವರ ಹೆಸರು ಮನಿಂದರ್ ಕೌರ್ ಹಾಗೂ ಅವರು ಬಹದ್ದೂರ್ ಗಡ್ ಗ್ರಾಮಕ್ಕೆ ಸೇರಿದವರು” ಎಂದು ಹೇಳಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ಕಂಗನಾ ತನ್ನ ಟ್ವೀಟ್ ಮೂಲಕ ರೈತರ ಪ್ರತಿಭಟನೆಯನ್ನು ಅಪಹಾಸ್ಯ ಮಾಡಿದ್ದಾರೆ ಎಂದು ನೋಟಿಸ್‌‌ನಲ್ಲಿ ತಿಳಿಸಲಾಗಿದೆ. “ಈ ರೀತಿಯಾಗಿ ಟ್ವೀಟ್ ಮಾಡುವ ಮೂಲಕ, ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಜನರನ್ನು ಬಾಡಿಗೆಗೆ ತರುವ ಮೂಲಕ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆಂದು” ಎಂದು ಅದು ಹೇಳುತ್ತದೆ.

ಮಂಗಳವಾರ ಸಂಜೆ ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಲ್ಕೀಸ್ ಬಾನು ಬಂದಿದ್ದು, ಆದರೆ ಅವರನ್ನು ಪೊಲೀಸರು ಬಂಧಿಸಿದರು. “ನಾವು ರೈತರನ್ನು ಬೆಂಬಲಿಸಲು ಇಲ್ಲಿದ್ದೇವೆ. ಶಾಹೀನ್ ಬಾಗ್‌‌ನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಅವರು ನಮ್ಮನ್ನು ಬೆಂಬಲಿಸಿದರು. ಈಗ ನಾವು ಅವರಿಗಾಗಿ ಇಲ್ಲಿದ್ದೇವೆ. ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಪ್ರತಿಭಟನಾ ಸ್ಥಳದಲ್ಲಿ ಹೇಳಿದ್ದರು.

ಭಾರತದ ಹಲವಾರು ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ನಿರಂತರ ಏಳು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರು ಕೇಂದ್ರದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆ ಕೂಗುತ್ತಿದ್ದಾರೆ. ಮಂಗಳವಾರ ಕೇಂದ್ರ ಸರ್ಕಾರ ಮತ್ತು 30 ಕ್ಕೂ ಹೆಚ್ಚು ಯೂನಿಯನ್ ನಾಯಕರ ನಡುವಿನ ಮಾತುಕತೆ ಮುರಿದು ಬಿದ್ದಿದ್ದು, ನಾಳೆ ನಾಲ್ಕನೇ ಸುತ್ತಿನ ಮಾತುಕತೆಗೆ ಕೇಂದ್ರ ಕರೆ ನೀಡಿದೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...