Homeಮುಖಪುಟಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

ಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದು, ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳಿಗೆ ಈ ವಿಡಿಯೋ ಮದ್ದುಗುಂಡುಗಳನ್ನು ನೀಡಿದಂತಾಗಿದೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಸೋಮಯ್ಯ ಮತ್ತು ಆಡಳಿತ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ವೀಡಿಯೊ ಅವರ ‘ಗುಣ ಮತ್ತು ನಿಜವಾದ ಮುಖ’ವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದೆ.

ಈ ವಿಡಿಯೋ ಅವರ ನೈಜ ಪಾತ್ರವನ್ನು ಮತ್ತು ಅವರ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರು, ”ಸಮ್ಮಿಶ್ರ ಸರ್ಕಾರದ ಚಾರಿತ್ರ್ಯ ಮತ್ತು ನಿಜ ಮುಖ ಇಂದು ಬಯಲಾಗಿದೆ. ಕಿರೀಟ್ ಸೋಮಯ್ಯ ಹಲವು ಶಾಸಕರು, ಸಂಸದರನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ. ಈಗ ಒಂದಷ್ಟು ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಿರುವುದನ್ನು ನಾವು ನೋಡಬಹುದು. ಎಂಟು ಗಂಟೆಯ ಕ್ಲಿಪ್ ಹೊರಬಿದ್ದಿದೆ. ಕ್ಲಿಪ್‌ನಿಂದಾಗಿ ಎಷ್ಟು ಮಹಿಳೆಯರು ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿರಬಹುದು ಎಂದು ನಾನು ಊಹಿಸಲು ಸಹ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ನೈತಿಕತೆಯ ಬಗ್ಗೆ ಆಗಾಗ್ಗೆ ಉಪನ್ಯಾಸ ನೀಡುವ ಬಿಜೆಪಿ ನಾಯಕರು ಇದೀಗ ಕಿರಿತ್ ಸೋಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು” ಎಂದು ಅವರು ಹೇಳಿದ್ದಾರೆ.

ಸೋಮಯ್ಯ ಅವರನ್ನು ಹೆಸರಿಸದೆ, ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು, ಬಾಳಾಸಾಹೇಬ್ ಠಾಕ್ರೆಯನ್ನು ಉಲ್ಲೇಖಿಸಿ ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು ಹೇಳಿದರು.

ಗೌರವಾನ್ವಿತ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮೌಲ್ಯಗಳನ್ನು ನಾವು ಹೊಂದಿದ್ದೇವೆ. ಅವರು ಹೇಳುತ್ತಿದ್ದರು, ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು… ನಿಖರವಾಗಿ ಅದೇ ಆಗುತ್ತಿದೆ. ಇನ್ನೂ ಬಹಳಷ್ಟು ಸಂಭವಿಸುತ್ತದೆ. ಏನಾಗುತ್ತದೆ ಎಂದು ನೋಡೋಣ. ಜೈ ಮಹಾರಾಷ್ಟ್ರ!” ಶ್ರೀ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್‌ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ ದೂರುಗಳು ಕೂಡ ದಾಖಲಾಗಿವೆ. ಆದರೆ, ಕಿರಿಟ್ ಸೋಮಯ್ಯ ಅವರು, ”ಈ ವಿಡಿಯೊ ನನ್ನದಲ್ಲ, ನನ್ನ ಹಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...