Homeಮುಖಪುಟಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

ಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದು, ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳಿಗೆ ಈ ವಿಡಿಯೋ ಮದ್ದುಗುಂಡುಗಳನ್ನು ನೀಡಿದಂತಾಗಿದೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಸೋಮಯ್ಯ ಮತ್ತು ಆಡಳಿತ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ವೀಡಿಯೊ ಅವರ ‘ಗುಣ ಮತ್ತು ನಿಜವಾದ ಮುಖ’ವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದೆ.

ಈ ವಿಡಿಯೋ ಅವರ ನೈಜ ಪಾತ್ರವನ್ನು ಮತ್ತು ಅವರ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರು, ”ಸಮ್ಮಿಶ್ರ ಸರ್ಕಾರದ ಚಾರಿತ್ರ್ಯ ಮತ್ತು ನಿಜ ಮುಖ ಇಂದು ಬಯಲಾಗಿದೆ. ಕಿರೀಟ್ ಸೋಮಯ್ಯ ಹಲವು ಶಾಸಕರು, ಸಂಸದರನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ. ಈಗ ಒಂದಷ್ಟು ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಿರುವುದನ್ನು ನಾವು ನೋಡಬಹುದು. ಎಂಟು ಗಂಟೆಯ ಕ್ಲಿಪ್ ಹೊರಬಿದ್ದಿದೆ. ಕ್ಲಿಪ್‌ನಿಂದಾಗಿ ಎಷ್ಟು ಮಹಿಳೆಯರು ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿರಬಹುದು ಎಂದು ನಾನು ಊಹಿಸಲು ಸಹ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ನೈತಿಕತೆಯ ಬಗ್ಗೆ ಆಗಾಗ್ಗೆ ಉಪನ್ಯಾಸ ನೀಡುವ ಬಿಜೆಪಿ ನಾಯಕರು ಇದೀಗ ಕಿರಿತ್ ಸೋಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು” ಎಂದು ಅವರು ಹೇಳಿದ್ದಾರೆ.

ಸೋಮಯ್ಯ ಅವರನ್ನು ಹೆಸರಿಸದೆ, ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು, ಬಾಳಾಸಾಹೇಬ್ ಠಾಕ್ರೆಯನ್ನು ಉಲ್ಲೇಖಿಸಿ ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು ಹೇಳಿದರು.

ಗೌರವಾನ್ವಿತ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮೌಲ್ಯಗಳನ್ನು ನಾವು ಹೊಂದಿದ್ದೇವೆ. ಅವರು ಹೇಳುತ್ತಿದ್ದರು, ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು… ನಿಖರವಾಗಿ ಅದೇ ಆಗುತ್ತಿದೆ. ಇನ್ನೂ ಬಹಳಷ್ಟು ಸಂಭವಿಸುತ್ತದೆ. ಏನಾಗುತ್ತದೆ ಎಂದು ನೋಡೋಣ. ಜೈ ಮಹಾರಾಷ್ಟ್ರ!” ಶ್ರೀ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್‌ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ ದೂರುಗಳು ಕೂಡ ದಾಖಲಾಗಿವೆ. ಆದರೆ, ಕಿರಿಟ್ ಸೋಮಯ್ಯ ಅವರು, ”ಈ ವಿಡಿಯೊ ನನ್ನದಲ್ಲ, ನನ್ನ ಹಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...