Homeಮುಖಪುಟಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

ಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದು, ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳಿಗೆ ಈ ವಿಡಿಯೋ ಮದ್ದುಗುಂಡುಗಳನ್ನು ನೀಡಿದಂತಾಗಿದೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಸೋಮಯ್ಯ ಮತ್ತು ಆಡಳಿತ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ವೀಡಿಯೊ ಅವರ ‘ಗುಣ ಮತ್ತು ನಿಜವಾದ ಮುಖ’ವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದೆ.

ಈ ವಿಡಿಯೋ ಅವರ ನೈಜ ಪಾತ್ರವನ್ನು ಮತ್ತು ಅವರ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರು, ”ಸಮ್ಮಿಶ್ರ ಸರ್ಕಾರದ ಚಾರಿತ್ರ್ಯ ಮತ್ತು ನಿಜ ಮುಖ ಇಂದು ಬಯಲಾಗಿದೆ. ಕಿರೀಟ್ ಸೋಮಯ್ಯ ಹಲವು ಶಾಸಕರು, ಸಂಸದರನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ. ಈಗ ಒಂದಷ್ಟು ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಿರುವುದನ್ನು ನಾವು ನೋಡಬಹುದು. ಎಂಟು ಗಂಟೆಯ ಕ್ಲಿಪ್ ಹೊರಬಿದ್ದಿದೆ. ಕ್ಲಿಪ್‌ನಿಂದಾಗಿ ಎಷ್ಟು ಮಹಿಳೆಯರು ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿರಬಹುದು ಎಂದು ನಾನು ಊಹಿಸಲು ಸಹ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ನೈತಿಕತೆಯ ಬಗ್ಗೆ ಆಗಾಗ್ಗೆ ಉಪನ್ಯಾಸ ನೀಡುವ ಬಿಜೆಪಿ ನಾಯಕರು ಇದೀಗ ಕಿರಿತ್ ಸೋಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು” ಎಂದು ಅವರು ಹೇಳಿದ್ದಾರೆ.

ಸೋಮಯ್ಯ ಅವರನ್ನು ಹೆಸರಿಸದೆ, ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು, ಬಾಳಾಸಾಹೇಬ್ ಠಾಕ್ರೆಯನ್ನು ಉಲ್ಲೇಖಿಸಿ ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು ಹೇಳಿದರು.

ಗೌರವಾನ್ವಿತ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮೌಲ್ಯಗಳನ್ನು ನಾವು ಹೊಂದಿದ್ದೇವೆ. ಅವರು ಹೇಳುತ್ತಿದ್ದರು, ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು… ನಿಖರವಾಗಿ ಅದೇ ಆಗುತ್ತಿದೆ. ಇನ್ನೂ ಬಹಳಷ್ಟು ಸಂಭವಿಸುತ್ತದೆ. ಏನಾಗುತ್ತದೆ ಎಂದು ನೋಡೋಣ. ಜೈ ಮಹಾರಾಷ್ಟ್ರ!” ಶ್ರೀ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್‌ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ ದೂರುಗಳು ಕೂಡ ದಾಖಲಾಗಿವೆ. ಆದರೆ, ಕಿರಿಟ್ ಸೋಮಯ್ಯ ಅವರು, ”ಈ ವಿಡಿಯೊ ನನ್ನದಲ್ಲ, ನನ್ನ ಹಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...