Homeಮುಖಪುಟಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: 'ನೀವೇ ಏನಾದ್ರು ಮಾಡಿ'; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

ಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: ‘ನೀವೇ ಏನಾದ್ರು ಮಾಡಿ’; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

- Advertisement -
- Advertisement -

ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲತೆಯ ಪ್ರಸಾರದ ಬಗ್ಗೆ ಇರುವ ಕಳವಳಗಳನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.28) ಒಪ್ಪಿಕೊಂಡಿದ್ದು, ಅದನ್ನು ಪರಿಹರಿಸಲು ಶಾಸಕಾಂಗ (ಸಂಸತ್ತು) ಕಾನೂನಿನ ಚೌಕಟ್ಟಿನೊಳಗೆ ಏನಾದರೂ ಮಾಡಬೇಕು ಎಂದು ಹೇಳಿದೆ.

ಪತ್ರಕರ್ತ ಮತ್ತು ಮಾಜಿ ಮಾಹಿತಿ ಆಯುಕ್ತ ಉದಯ್ ಮಹೂರ್ಕರ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಎ.ಜಿ ಮಸಿಹ್ ಅವರ ಪೀಠ, ಕೇಂದ್ರ ಸರ್ಕಾರ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಎಎಲ್‌ಟಿಟಿ (ಎಎಲ್‌ಟಿಟಿ ಬಾಲಾಜಿ) ಉಲ್ಲು ಡಿಜಿಟಲ್ ಮತ್ತು ಮುಬಿ ಹಾಗೂ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್  (ಟ್ವಿಟ್ಟರ್) ಗೂಗಲ್, ಮೆಟಾ (ಫೇಸ್‌ಬುಕ್ ) ಮತ್ತು ಆಪಲ್‌ಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ವಿಷ್ಣುಶಂಕರ್ ಜೈನ್ ಅವರು, “ಈ ಅರ್ಜಿಯನ್ನು ಯಾರ ವಿರುದ್ದ ಸಲ್ಲಿಸಿಲ್ಲ, ನಿಜವಾದ ಕಳವಳದಿಂದ ಸಲ್ಲಿಸಲಾಗಿದೆ. ಯಾವುದೇ ನಿರ್ಬಂಧವಿಲ್ಲದೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳು ಹರಿದಾಡುತ್ತಿವೆ” ಎಂದು ಹೇಳಿದ್ದಾರೆ.

ಇದನ್ನು ಆಲಿಸಿದ ನ್ಯಾಯಮೂರ್ತಿ ಗವಾಯಿ ಅವರು, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ, “ಏನಾದರು ಮಾಡಿ… ಶಾಸಕಾಂಗದ ಮೂಲಕ ಏನಾದರು ಮಾಡಿ” ಎಂದು ಎಂದಿದ್ದಾರೆ.

ಈ ವೇಳೆ, “ಕೆಲವು ನಿಯಮಿತ ಕಾರ್ಯಕ್ರಮಗಳಲ್ಲಿಯೂ ಸಹ ಆಕ್ಷೇಪಾರ್ಹ ವಿಷಯಗಳು ಕಾಣಿಸಿಕೊಳ್ಳುತ್ತವೆ ಎಂದು ಮೆಹ್ತಾ ಗಮನಸೆಳೆದಿದ್ದಾರೆ. ಕೆಲವು ಕಾರ್ಯಕ್ರಮಗಳು ಎಷ್ಟು ವಿಕೃತವಾಗಿವೆಯೆಂದರೆ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ಒಟ್ಟಿಗೆ ಕುಳಿತು ಅವುಗಳನ್ನು ನೋಡಲು ಸಾಧ್ಯವೇ ಇಲ್ಲ. ಸೆನ್ಸಾರ್‌ಶಿಪ್ ಇಲ್ಲ, ಆದರೆ ಕೆಲವು ನಿಯಂತ್ರಣಗಳು ಜಾರಿಯಲ್ಲಿವೆ, ಇನ್ನು ಕೆಲವು ಚಿಂತನೆಯಲ್ಲಿವೆ” ಎಂದು ತಿಳಿಸಿದ್ದಾರೆ.

“ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿವಿಧ ಆಕ್ಷೇಪಾರ್ಹ, ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಈ ಅರ್ಜಿಯು ಪ್ರಮುಖ ಕಳವಳವನ್ನು ಹುಟ್ಟುಹಾಕುತ್ತದೆ. ವಿಷಯವು ವಿಕೃತವಾಗಿದೆ ಎಂದು ಸಾಲಿಸಿಟರ್ ಜನರಲ್ ಅವರೇ ನ್ಯಾಯಯುತವಾಗಿ ಹೇಳುತ್ತಿದ್ದಾರೆ. ಇನ್ನೂ ಕೆಲವು ನಿಯಮಗಳು ಚಿಂತನೆಯಲ್ಲಿವೆ ಎಂದು ಅವರು ತಿಳಿಸಿದ್ದಾರೆ” ಎಂದು ನೋಟಿಸ್ ಜಾರಿ ಮಾಡಿದ ಪೀಠವು ತನ್ನ ಆದೇಶದಲ್ಲಿ ಹೇಳಿದೆ.

ಈ ವರ್ಷದ ಮಾರ್ಚ್‌ನಲ್ಲಿ ಸಲ್ಲಿಸಲಾದ ಪಿಐಎಲ್‌ನಲ್ಲಿ “ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂದಿನ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುವಂತಹ ಅಶ್ಲೀಲ, ವಿಕೃತ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ವಿಕೃತಿಯ ವಿಷಯಗಳು ಯಾವುದೇ ನಿಯಂತ್ರಣಗಳಿಲ್ಲದೆ ಪ್ರಸಾರವಾಗುತ್ತಿವೆ” ಎಂದು ಗಮನಸೆಳೆಯಲಾಗಿದೆ.

“ಒಂದು ಸಮಯದಲ್ಲಿ ವೈಯಕ್ತಿಕವಾಗಿದ್ದ ವಿಷಯಗಳು ಈಗ ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮೂಲೆ ಮೂಲೆಗೂ ಹಬ್ಬಿದೆ. ಅಶ್ಲೀಲ ವಿಷಯಗಳ ಈ ಅನಿಯಂತ್ರಿತ ಹರಡುವಿಕೆಯನ್ನು ನಿಯಂತ್ರಿಸದಿದ್ದರೆ ಸಾಮಾಜಿಕ ಮೌಲ್ಯಗಳು, ಮಾನಸಿಕ ಆರೋಗ್ಯ ಮತ್ತು ಸಾರ್ವಜನಿಕ ಸುರಕ್ಷತೆಯ ಮೇಲೆ ತೀವ್ರ ಪರಿಣಾಮಗಳು ಬೀರಬಹುದು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಮಕ್ಕಳ ಅಶ್ಲೀಲತೆ, ಸಾಫ್ಟ್-ಕೋರ್ ಅಡಲ್ಟ್ ಕಂಟೆಂಟ್‌ಗಳಂತಹ ವಿಷಯಗಳ ಅನಿಯಂತ್ರಿತ ಪ್ರಸರಣವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಹೆಚ್ಚುತ್ತಿರುವ ಪ್ರವೃತ್ತಿಗೆ ಕಾರಣವಾಗಿದೆ ಮತ್ತು ಯುವ ಮನಸ್ಸುಗಳ ಮಾನಸಿಕ ಬೆಳವಣಿಗೆಯನ್ನು ನಕಾರಾತ್ಮಕವಾಗಿ ರೂಪಿಸುತ್ತಿದೆ” ಎಂದು ವಿವರಿಸಲಾಗಿದೆ.

ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...