Homeಮುಖಪುಟಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: 'ನೀವೇ ಏನಾದ್ರು ಮಾಡಿ'; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

ಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: ‘ನೀವೇ ಏನಾದ್ರು ಮಾಡಿ’; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

- Advertisement -
- Advertisement -

ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲತೆಯ ಪ್ರಸಾರದ ಬಗ್ಗೆ ಇರುವ ಕಳವಳಗಳನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.28) ಒಪ್ಪಿಕೊಂಡಿದ್ದು, ಅದನ್ನು ಪರಿಹರಿಸಲು ಶಾಸಕಾಂಗ (ಸಂಸತ್ತು) ಕಾನೂನಿನ ಚೌಕಟ್ಟಿನೊಳಗೆ ಏನಾದರೂ ಮಾಡಬೇಕು ಎಂದು ಹೇಳಿದೆ.

ಪತ್ರಕರ್ತ ಮತ್ತು ಮಾಜಿ ಮಾಹಿತಿ ಆಯುಕ್ತ ಉದಯ್ ಮಹೂರ್ಕರ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಎ.ಜಿ ಮಸಿಹ್ ಅವರ ಪೀಠ, ಕೇಂದ್ರ ಸರ್ಕಾರ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಎಎಲ್‌ಟಿಟಿ (ಎಎಲ್‌ಟಿಟಿ ಬಾಲಾಜಿ) ಉಲ್ಲು ಡಿಜಿಟಲ್ ಮತ್ತು ಮುಬಿ ಹಾಗೂ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್  (ಟ್ವಿಟ್ಟರ್) ಗೂಗಲ್, ಮೆಟಾ (ಫೇಸ್‌ಬುಕ್ ) ಮತ್ತು ಆಪಲ್‌ಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ವಿಷ್ಣುಶಂಕರ್ ಜೈನ್ ಅವರು, “ಈ ಅರ್ಜಿಯನ್ನು ಯಾರ ವಿರುದ್ದ ಸಲ್ಲಿಸಿಲ್ಲ, ನಿಜವಾದ ಕಳವಳದಿಂದ ಸಲ್ಲಿಸಲಾಗಿದೆ. ಯಾವುದೇ ನಿರ್ಬಂಧವಿಲ್ಲದೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳು ಹರಿದಾಡುತ್ತಿವೆ” ಎಂದು ಹೇಳಿದ್ದಾರೆ.

ಇದನ್ನು ಆಲಿಸಿದ ನ್ಯಾಯಮೂರ್ತಿ ಗವಾಯಿ ಅವರು, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ, “ಏನಾದರು ಮಾಡಿ… ಶಾಸಕಾಂಗದ ಮೂಲಕ ಏನಾದರು ಮಾಡಿ” ಎಂದು ಎಂದಿದ್ದಾರೆ.

ಈ ವೇಳೆ, “ಕೆಲವು ನಿಯಮಿತ ಕಾರ್ಯಕ್ರಮಗಳಲ್ಲಿಯೂ ಸಹ ಆಕ್ಷೇಪಾರ್ಹ ವಿಷಯಗಳು ಕಾಣಿಸಿಕೊಳ್ಳುತ್ತವೆ ಎಂದು ಮೆಹ್ತಾ ಗಮನಸೆಳೆದಿದ್ದಾರೆ. ಕೆಲವು ಕಾರ್ಯಕ್ರಮಗಳು ಎಷ್ಟು ವಿಕೃತವಾಗಿವೆಯೆಂದರೆ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ಒಟ್ಟಿಗೆ ಕುಳಿತು ಅವುಗಳನ್ನು ನೋಡಲು ಸಾಧ್ಯವೇ ಇಲ್ಲ. ಸೆನ್ಸಾರ್‌ಶಿಪ್ ಇಲ್ಲ, ಆದರೆ ಕೆಲವು ನಿಯಂತ್ರಣಗಳು ಜಾರಿಯಲ್ಲಿವೆ, ಇನ್ನು ಕೆಲವು ಚಿಂತನೆಯಲ್ಲಿವೆ” ಎಂದು ತಿಳಿಸಿದ್ದಾರೆ.

“ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿವಿಧ ಆಕ್ಷೇಪಾರ್ಹ, ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಈ ಅರ್ಜಿಯು ಪ್ರಮುಖ ಕಳವಳವನ್ನು ಹುಟ್ಟುಹಾಕುತ್ತದೆ. ವಿಷಯವು ವಿಕೃತವಾಗಿದೆ ಎಂದು ಸಾಲಿಸಿಟರ್ ಜನರಲ್ ಅವರೇ ನ್ಯಾಯಯುತವಾಗಿ ಹೇಳುತ್ತಿದ್ದಾರೆ. ಇನ್ನೂ ಕೆಲವು ನಿಯಮಗಳು ಚಿಂತನೆಯಲ್ಲಿವೆ ಎಂದು ಅವರು ತಿಳಿಸಿದ್ದಾರೆ” ಎಂದು ನೋಟಿಸ್ ಜಾರಿ ಮಾಡಿದ ಪೀಠವು ತನ್ನ ಆದೇಶದಲ್ಲಿ ಹೇಳಿದೆ.

ಈ ವರ್ಷದ ಮಾರ್ಚ್‌ನಲ್ಲಿ ಸಲ್ಲಿಸಲಾದ ಪಿಐಎಲ್‌ನಲ್ಲಿ “ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂದಿನ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುವಂತಹ ಅಶ್ಲೀಲ, ವಿಕೃತ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ವಿಕೃತಿಯ ವಿಷಯಗಳು ಯಾವುದೇ ನಿಯಂತ್ರಣಗಳಿಲ್ಲದೆ ಪ್ರಸಾರವಾಗುತ್ತಿವೆ” ಎಂದು ಗಮನಸೆಳೆಯಲಾಗಿದೆ.

“ಒಂದು ಸಮಯದಲ್ಲಿ ವೈಯಕ್ತಿಕವಾಗಿದ್ದ ವಿಷಯಗಳು ಈಗ ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮೂಲೆ ಮೂಲೆಗೂ ಹಬ್ಬಿದೆ. ಅಶ್ಲೀಲ ವಿಷಯಗಳ ಈ ಅನಿಯಂತ್ರಿತ ಹರಡುವಿಕೆಯನ್ನು ನಿಯಂತ್ರಿಸದಿದ್ದರೆ ಸಾಮಾಜಿಕ ಮೌಲ್ಯಗಳು, ಮಾನಸಿಕ ಆರೋಗ್ಯ ಮತ್ತು ಸಾರ್ವಜನಿಕ ಸುರಕ್ಷತೆಯ ಮೇಲೆ ತೀವ್ರ ಪರಿಣಾಮಗಳು ಬೀರಬಹುದು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಮಕ್ಕಳ ಅಶ್ಲೀಲತೆ, ಸಾಫ್ಟ್-ಕೋರ್ ಅಡಲ್ಟ್ ಕಂಟೆಂಟ್‌ಗಳಂತಹ ವಿಷಯಗಳ ಅನಿಯಂತ್ರಿತ ಪ್ರಸರಣವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಹೆಚ್ಚುತ್ತಿರುವ ಪ್ರವೃತ್ತಿಗೆ ಕಾರಣವಾಗಿದೆ ಮತ್ತು ಯುವ ಮನಸ್ಸುಗಳ ಮಾನಸಿಕ ಬೆಳವಣಿಗೆಯನ್ನು ನಕಾರಾತ್ಮಕವಾಗಿ ರೂಪಿಸುತ್ತಿದೆ” ಎಂದು ವಿವರಿಸಲಾಗಿದೆ.

ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...