Homeಚಳವಳಿಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ನ್ಯಾಯದ ದಿನವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ ಎಂದು ಹೇಳಿಕೆಯಲ್ಲಿ ದೇವನೂರು ಮಹಾದೇವರವರು ತಿಳಿಸಿದ್ದಾರೆ.

- Advertisement -
- Advertisement -

ಮೇ 16ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಆನಂದ್ ತೇಲ್ತುಂಬ್ಡೆ ಮತ್ತಿತರ ಚಿಂತಕರ ಬೆಂಬಲಕ್ಕೆ ನಿಲ್ಲೋಣ ಎಂದು ದೇವನೂರು ಮಹಾದೇವರವರು ಕರೆ ನೀಡಿದ್ದಾರೆ.

ಈ ಕುರಿತು 35 ಚಿಂತಕರ, ಹೋರಾಟಗಾರರ, ಪತ್ರಕರ್ತರ ಸಹಿಯುಳ್ಳ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ಒಂದು ತಿಂಗಳಾಗುತ್ತದೆ. ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ. ಅವರೊಂದಿಗೆ ಹಾಗು ಭೀಮಾಕೋರೆಗಾವ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿಂತಕರೊಂದಿಗೆ ನಾವಿದ್ದೀವಿ ಎನ್ನುವುದನ್ನು ವ್ಯಕ್ತಪಡಿಸಲು ಮೇ 16 ರಂದು ನಾವೆಲ್ಲರೂ ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಮನವಿ ಮಾಡಿಕೊಳ್ಳುತ್ತೇವೆ.

ಡಾ. ತೆಲ್ತುಂಬ್ಡೆಯವರು ಇಂದು ನ್ಯಾಯದ ಒಂದು ರಾಷ್ಟ್ರೀಯ ಸಂಕೇತವಾಗಿದ್ದಾರೆ. ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಬಡ ದಲಿತ ಕುಟುಂಬದಲ್ಲಿ ಹುಟ್ಟಿದರು. ಪೇಂಟರ್ ಆಗಿ ದುಡಿದು ವಿದ್ಯಾಭ್ಯಾಸ ಮಾಡಿದರು. ನಂತರ ಮೆಕಾನಿಕಲ್‌ ಇಂಜಿನಿಯರ್ ಆದವರು. ಆಮೇಲೆ ಸೈಬರ್‌ ನೆಟಿಕ್ಸ್‌ನಲ್ಲಿ ಡಾಕ್ಟರೇಟ್ ಮಾಡಿದರು. ಅಹಮದಾಬಾದಿನ ಐಐಎಂನಲ್ಲಿ ಎಂಬಿಎ ಮುಗಿಸಿದರು. ದೇಶದಲ್ಲಿ ಡೇಟಾ ಅನಾಲಿಸಿಸ್ ಪ್ರಾರಂಭಿಸಿದ ಪ್ರಮುಖರಲ್ಲಿ ಅವರೂ ಒಬ್ಬರು. ಸಾರ್ವಜನಿಕ ಸ್ವಾಮ್ಯದ ಪೆಟ್ರೊನೆಟ್ ಇಂಡಿಯ ಕಂಪೆನಿಯಲ್ಲಿ ನಿರ್ವಾಹಕ ನಿರ್ದೇಶಕರು ಮತ್ತು ಸಿಇಒ ಆಗಿದ್ದರು. ಐಐಟಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬಂಧನವಾಗುವ ಸಮಯದಲ್ಲಿ ಗೋವಾ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟಿನಲ್ಲಿ ಬಿಗ್ ಡೇಟಾ ಅನಲಿಟಿಕ್ಸ್‌ನಲ್ಲಿ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿದ್ದರು. ಇವರು, ಬಾಬಾಸಾಹೇಬರ ಮೊಮ್ಮಗಳನ್ನು ಮದುವೆ ಆಗಿದ್ದಾರೆ.  ಜೊತೆಗೆ ತೇಲ್ತುಂಬ್ಡೆಯವರ ಬದುಕೂ ಕೂಡ ಬಾಬಾಸಾಹೇಬ್ ಅಂಬೇಡ್ಕರರ ಬದುಕನ್ನೇ ನೆನಪಿಸುತ್ತದೆ.

ಕಳೆದ ಎರಡು ದಶಕಗಳಲ್ಲಿ ತೆಲ್ತುಂಬ್ಡೆ ಭಾರತದ ಸಾಮಾಜಿಕ ನ್ಯಾಯದ ವಿಷಯದಲ್ಲಿ ಸುಸಂಬದ್ಧ ಹಾಗೂ ಗೌರವಯುತ ದನಿಯಾಗಿದ್ದಾರೆ. ತಮ್ಮ ಬರಹಗಳು ಹಾಗೂ ಸಾಮಾಜಿಕ ಮುಖಾಮುಖಿಯ ಮೂಲಕ ಜಾತಿ  ಹಾಗೂ ಇನ್ನಿತರ ಶೋಷಣೆಯ ಸ್ವರೂಪಗಳ ವಿರುದ್ಧ ಧ್ವನಿಯೆತ್ತಿದ್ದಾರೆ. ಅದರ ಜೊತೆಯಲ್ಲೇ ಎಲ್ಲಾ ರೀತಿಯ ಕುರುಡು ನಂಬಿಕೆಗಳು ಹಾಗೂ ಸಾಂಪ್ರದಾಯಿಕತೆಯನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಚಿಂತನೆಗಳ ಮೂಲಕ ಬಾಬಾಸಾಹೇಬರ ವಿಚಾರಗಳನ್ನು ಪ್ರತಿಪಾದಿಸುತ್ತಾ ಮತ್ತು ಅವುಗಳನ್ನು ವಿಸ್ತರಿಸುತ್ತಾ ಸಾಗಿದ್ದಾರೆ. ಅದರ ಜೊತೆಗೆ ಅವರು ಡಾ.ಅಂಬೇಡ್ಕರರನ್ನು ದೇವರನ್ನಾಗಿ ಮಾಡುವ ಪ್ರಯತ್ನದ ವಿರುದ್ಧವು ನಮ್ಮನ್ನು ಎಚ್ಚರಿಸುತ್ತಿದ್ದಾರೆ. ಸಾಮಾಜಿಕ ನ್ಯಾಯವನ್ನು ಕುರಿತಂತೆ ನಮ್ಮ ಚಿಂತನೆಯ ಪರಿಧಿಯನ್ನೇ ಅವರು ವಿಸ್ತರಿಸಿದ್ದಾರೆ ಎನ್ನಬಹುದು. ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಮಾನವ ಹಕ್ಕುಗಳ ಬಗ್ಗೆ ಅವರದು ಉತ್ಕಟವಾದ ಬದ್ಧತೆ. ಆ ಬದ್ಧತೆಯಿಂದಾಗಿಯೇ ಅವರು ಈಗಿರುವ ಸರ್ಕಾರವೂ ಸೇರಿದಂತೆ ಎಲ್ಲಾ ಸರ್ಕಾರಗಳ ನೀತಿಗಳನ್ನು ನಿಷ್ಠುರವಾಗಿ ಪ್ರಶ್ನಿಸಿತ್ತಾ ಬಂದಿದ್ದಾರೆ. ಬಾಬಾಸಾಹೇಬರ ಹುಟ್ಟುಹಬ್ಬದಂದೇ ಅವರು ಬಂಧನಕ್ಕೆ ಒಳಗಾಗಿರುವುದು ಇಂದಿನ ಶೋಷಕ ವ್ಯವಸ್ಥೆಯ ಮೂಲವನ್ನು ಅವರು ಅಂಬೇಡ್ಕರ್‌ರಂತೆಯೇ ಕಟುವಾಗಿ ಟೀಕಿಸುತ್ತಿರುವುದೆ ಕಾರಣ ಎಂಬ ತೀರ್ಮಾನಕ್ಕೆ ನಾವು ಬರುವಂತಾಗಿದೆ.

ನ್ಯಾಯದ ಸಂಕೇತವಾಗಿದ್ದ ಇಂತಹ ವ್ಯಕ್ತಿ ಇಂದು ಅನ್ಯಾಯದ ವ್ಯವಸ್ಥೆಯ ಬಂಧಿಯಾಗಿರುವುದು ಒಂದು ದೊಡ್ಡ ದುರಂತ. ತೇಲ್ತುಂಬ್ಡೆಯವರು ಬದುಕಿಡೀ ಹಿಂಸೆ ಮತ್ತು ಬಲಪ್ರಯೋಗವನ್ನು ವಿರೋಧಿಸುತ್ತಾ ಬಂದವರು. ಆದರೀಗ ಅವರ ಮೇಲೆಯೇ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎಂಬ ಆರೋಪ ಹೊರಿಸಲಾಗಿದೆ.  ಇದಕ್ಕೆ ನೆಪವಾದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಕರೆ ನೀಡಿದ್ದವರು ಉನ್ನತ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರು. ತೆಲ್ತುಂಬ್ಡೆಯವರು ಅದರಲ್ಲಿ ಭಾಗವಹಿಸಿಯೂ ಇರಲಿಲ್ಲ. ವಸ್ತುಸ್ಥಿತಿ ಹೀಗಿದ್ದಾಗಲೂ ಇವರು ಸಮಾವೇಶದ ಮೂಲಕ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎನ್ನುವ ಆರೋಪ ಹೊರಿಸಲಾಗಿದೆ. ಇದು ನಿಜಕ್ಕೂ ತುಂಬಾ ಆತಂಕದ ವಿಷಯ. ಅಷ್ಟೇ  ಅಲ್ಲ ಅದು ಒಂದು ಸಣ್ಣ ಪುರಾವೆಯೂ ಇಲ್ಲದೆ ಕೆಲವು ಕ್ಷುಲಕ ಆರೋಪಗಳ ಜೊತೆಗೆ ಪ್ರಧಾನ ಮಂತ್ರಿಯ ಕೊಲೆಯ ಸಂಚಿನ ಆರೋಪವನ್ನೂ ತೇಲ್ತುಂಬ್ಡೆಯವರ ಮೇಲೆ ಹೊರಿಸಲಾಗಿದೆ. ಇದು ನಿಜಕ್ಕೂ ಹಾಸ್ಯಾಸ್ಪದ. ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಿ, ನ್ಯಾಯಯುತ ವಿಚಾರಣೆಯ ಸಾಧ್ಯತೆ ತೆರೆದುಕೊಳ್ಳುತ್ತಿದ್ದಂತಯೇ ಆ ವಿಚಾರಣೆಯನ್ನೇ ಡಿಢೀರನೇ ಮಹಾರಾಷ್ಟ್ರ ಪೋಲಿಸರಿಂದ ರಾಷ್ಟ್ರೀಯ ವಿಚಾರಣಾ ಏಜೆನ್ಸಿಗೆ (ಎನ್.ಐ.ಎ.) ಏಕಪಕ್ಷಿಯವಾಗಿ ಕೈಗೆತ್ತಿಕೊಂಡಿರುವ ಪ್ರಕ್ರಿಯೆ ತೀರ ಅನುಮಾನಸ್ಪದಾಗಿದೆ.  ಈ ಹಿನ್ನಲೆಯಲ್ಲಿ, ಡಾ. ತೇಲ್ತುಂಬ್ಡೆ ಮತ್ತಿತರ ಕಾರ್ಯಕರ್ತರಿಗೆ ನ್ಯಾಯಯುತ ಮುಕ್ತ ವಿಚಾರಗಳಿಂದ ಅವರನ್ನು ವಂಚಲಿಸಕ್ಕಾಗಿಯೇ ಜಾಮೀನು ಸಿಗದ ಹಾಗೂ ನ್ಯಾಯಯುತ ವಿಚಾರಣೆಯೂ ಜರುಗದ ಪೈಶಾಚಿಕ ಯು.ಎ.ಪಿ.ಎ. (UAPA) ಕಾಯ್ದೆಯಡಿ ಬಂಧಿಸಿರುವುದು ಸ್ವಯಂ ಸ್ಪಷ್ಟವಾಗಿದೆ.

ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವ ಇಂದಿನ ಸಂದರ್ಭದಲ್ಲಿ, ಜೈಲಲ್ಲಿರುವ ಅಪರಾಧಿಗಳನ್ನೇ ಕೋವಿಡ್-19 ರ ಸೋಂಕಿನ ವಾತಾವರಣದಿಂದಾಗಿ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಹಿರಿಯರಾದ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎನ್ನಬೇಕಾಗುತ್ತದೆ.

ಸಮಾಜದ ಅನ್ಯಾಯದ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸೆರೆಯಲ್ಲಿರುವ ಡಾ. ತೆಲ್ತುಂಬ್ಡೆ, ಜಗತ್ತಿನಾದ್ಯಂತ ಶೋಷಣೆ ಹಾಗೂ ಅನ್ಯಾಯದ ವಿರುದ್ಧದ ದನಿಯನ್ನು ಪ್ರತಿನಿಧಿಸುತ್ತಾರೆ. ಅದರಿಂದಾಗಿಯೇ ಜಿಜ್ಞಾಸುಗಳು, ಚಿಂತಕರು, ಕಲಾವಿದರು, ಕಾರ್ಯಕರ್ತರು, ಮುಖಂಡರು, ಮತ್ತು ನಾಗರಿಕ ಹಕ್ಕುಗಳ ಸಂಘಟನೆಗಳು ಭಾರತದಲ್ಲಿ ಮತ್ತು ವಿದೇಶಗಳಲ್ಲಿ ಅವರ ಬಂಧನದ ವಿರುದ್ಧ ಧ್ವನಿಯೆತ್ತಿದ್ದಾರೆ. ಅವರಲ್ಲಿ ಪ್ರಮುಖರಾದವರು ಅಮ್ನೆಸ್ಟಿ ಇಂಟರ್ ನ್ಯಾಷನಲ್, ಇಂಡಿಯಾ ಸಿವಿಲ್ ವಾಚ್, ರಿಸ್ಕ್ ನೆಟ್ ವರ್ಕನ ವಿದ್ವಾಂಸರುಗಳು, ಪ್ರೊಫೆಸರ್ ಅಮರ್ತ್ಯ ಸೇನ್, ನೋಮ್‌ಚಾಮ್ಸ್ಕಿ, ಜೀನ್‌ಡ್ರೇಜ್, ಬಿ ಎಲ್ ಮುಂಗೇಕರ್, ಅರುಂಧತಿರಾಯ್, ಅಪರ್ಣಾ ಸೇನ್, ರೋಮಿಲಾಥಾಪರ್, ಪ್ರಭಾತ್ ಪಟ್ನಾಯಕ್, ದೇವಕಿಜೈನ್, ಪ್ರಕಾಶ್‌ಅಂಬೇಡ್ಕರ್, ಮಜದಾರೂವಾಲ  ಮುಂತಾದವರು ಸೇರಿದಂತೆ 5000ಕ್ಕೂ ಹೆಚ್ಚು ಪ್ರಜ್ಘಾವಂತ ನಾಗರಿಕರು ದನಿಯೆತ್ತಿದ್ದಾರೆ.

ಇದಕ್ಕೆ ನಾವೂ ಜತೆಗೂಡಬೇಕಾಗಿದೆ. ಅದಕ್ಕಾಗಿ ಮೇ 16 ನೇ ದಿನವನ್ನು ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಸಲಹೆ ನೀಡುತ್ತೇವೆ. ಡಾ.ತೇಲ್ತುಂಬ್ಡೆ ಮತ್ತು ಅವರೊಡನೆ ಆರೋಪ ಎದುರಿಸುತ್ತಿರುವ ಕಾರ್ಯಕರ್ತರಿಗೆ ನ್ಯಾಯ ದೊರಕಿಸಲು ಒತ್ತಾಯಿಸಲು ಹಾಗೂ ಅವರು ಎತ್ತಿಹಿಡಿದ ಒಂದು ನ್ಯಾಯಯುತ ಸಮಾಜದ ವಿಚಾರವನ್ನು ಬೆಂಬಲಿಸಲು ಮೇ 16 ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ.

ಇಂದು ಕೊರೋನಾ ವೈರಾಣುವಿನ ಪಿಡುಗಿನ ಕಾರಣದಿಂದಾಗಿ ಸಾರ್ವಜನಿಕವಾಗಿ ಸೇರುವುದಕ್ಕೆ ನಿರ್ಬಂಧವಿರುವುದರಿಂದ ಮೇ 16 ರ ನ್ಯಾಯದ ದಿನ ವನ್ನು ಕೆಳಕಂಡಂತೆ ಆಚರಿಸಬಹುದೆಂದು ನಾವು ಪ್ರಸ್ತಾಪಿಸುತ್ತೇವೆ:

1.            ನಮ್ಮ ಎಲ್ಲ ಸಾಮಾಜಿಕ ಮಾಧ್ಯಮದ ಪ್ರೊಫೈಲ್ (ಡಿ.ಪಿ.) ಚಿತ್ರವನ್ನು ಮೇ 16 ರಂದು ಡಾ. ತೇಲ್ತುಂಬ್ಡೆಯವರ ಚಿತ್ರವನ್ನು ಹಾಕಿಕೊಳ್ಳೋಣ.

2.            ನಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಎರಡು ಗಂಟೆಗಳ ಕಾಲ ಸಂಜೆ 4ರಿಂದ 6ರವರೆಗೆ #ಜಸ್ಟಿಸ್4 ತೆಲ್ತುಂಬ್ಡೆ ಆಂದೋಲನವನ್ನು ನಡೆಸೋಣ.

3.            ವೆಬಿನಾರ್ ಮತ್ತು ವರ್ಚುಯಲ್ ಸಭೆಗಳನ್ನು ಸಂಘಟಿಸಿ ಮೇ ತಿಂಗಳ ಎಲ್ಲಾ ದಿನಗಳಲ್ಲೂ ಡಾ. ತೆಲ್ತುಂಬ್ಡೆಯವರ ಹಾಗೂ ಬಾಬಾಸಾಹೇಬ ಅಂಬೇಡ್ಕರರನ್ನು ಓದೋಣ ಮತ್ತು ಚರ್ಚಿಸೋಣ.

ನ್ಯಾಯದ ದಿನ ವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ.

ಸಹಿ

ಜಸ್ಟೀಸ್‌ ಗೋಪಾಲಗೌಡ, (ಸುಪ್ರೀಂ ಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿಗಳು)

ರಾಜ್‌ಮೋಹನ್‌ ಗಾಂಧಿ (ಲೇಖಕರು ಮತ್ತು ಸಂಶೋಧನಾ ಪ್ರಾಧ್ಯಾಪಕರು)

ಪ್ರಶಾಂತ್‌ ಭೂಷಣ್‌ (ಸುಪ್ರೀಂ ಕೋರ್ಟ್‌ ವಕೀಲರು)

ಅಡ್ಮಿರಲ್‌ ರಾಮ್‌ದಾಸ್‌ (ನಿವೃತ್ತ ಭಾರತೀಯ ನೌಕದಳದ ಮುಖ್ಯಸ್ಥರು)

ಅಜಯ್‌ಕುಮಾರ್‌ ಸಿಂಗ್‌ (ಕರ್ನಾಟಕದ ಮಾಜಿ ಪೊಲೀಸ್‌ ಮಹಾನಿರ್ದೇಶಕರು)

ಪ್ರೊ.ಆನಂದ್‌ ಕುಮಾರ್‌ (ಜೆಎನ್‌ಯು ಪ್ರಾಧ್ಯಾಪಕರು)

ಎ.ಎನ್‌ ಯೆಲ್ಲಪ್ಪ ರೆಡ್ಡಿ (ಪರಿಸರವಾದಿಗಳು)

ಅರುಣಾ ರಾಯ್‌ (ಮಜ್ದೂರ್‌ ಕಿಸಾನ್‌ ಶಕ್ತಿ ಸಂಘಟನ್‌ನ ಸ್ಥಾಪಕರು)

ಏಕಾಂತಯ್ಯ (ಕರ್ನಾಟಕದ ಮಾಜಿ ಸಚಿವರು)

ಜಸ್ಟಿಸ್‌ ಎ.ಪಿ ಶಾ (ನಿವೃತ್ತ ಮುಖ್ಯ ನ್ಯಾಯಾಧೀಶರು, ದೆಹಲಿ ಹೈಕೋರ್ಟ್‌)

ಜಸ್ಟಿಸ್‌ ಎಚ್‌.ಎನ್‌ ನಾಗಮೋಹನ್‌ದಾಸ್‌ (ನಿವೃತ್ತ ಮುಖ್ಯ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಕೆ.ಸಿ ರಘು (ಉದ್ಯಮಿಗಳು)

ಕೋದಂಡರಾಮಯ್ಯ (ಮಾಜಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌)

ಕೃಷ್ಣ ಕೆ.ಆರ್‌ ಪೇಟೆ (ಮಾಜಿ ವಿಧಾನಸಭಾ ಸ್ಪೀಕರ್‌)

ಕುಮಾರ್‌ ಪ್ರಶಾಂತ್‌ (ಅಧ್ಯಕ್ಷರು, ಗಾಂಧೀ ಪೀಸ್‌ ಫೌಂಡೇಶನ್‌)

ಮರಿಸ್ವಾಮಿ (ಮಾಜಿ ಡೈರಕ್ಟರ್‌ ಜನರಲ್‌ ಆಫ್‌ ಪೊಲೀಸ್‌, ಕರ್ನಾಟಕ)

ಎಸ್‌.ಕೆ ಕಾಂತ (ಕಾರ್ಮಿಕ ಮುಖಂಡರು ಮತ್ತು ಮಾಜಿ ಸಚಿವರು)

ಸುಹಾಸ್‌ ಪಲ್ಸಿಕರ್‌ (ನಿವೃತ್ತ ಪ್ರಾಧ್ಯಾಪಕರು, ಸಾಹಿತ್ಯ ಅಕಾಡೆಮಿ ವಿಜೇತರು)

ವಾಜಹತ್‌ ಹಬೀಬುಲ್ಲ (ಮಾಜಿ ಮುಖ್ಯ ಮಾಹಿತಿ ಆಯುಕ್ತರು)

ಯೋಗೇಂದ್ರ ಯಾದವ್‌ (ಅಧ್ಯಕ್ಷರು, ಸ್ವರಾಜ್‌ ಇಂಡಿಯಾ)

ಜಸ್ಟೀಸ್‌ ಎ.ಜೆ ಸದಾಶಿವ (ನಿವೃತ್ತ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಪ್ರೊ.ರವಿವರ್ಮಕುಮಾರ್‌ (ಮಾಜಿ ಅಡ್ವೋಕೇಟ್‌ ಜನರಲ್‌, ಕರ್ನಾಟಕ)

ಸುಗತ ರಾಜು (ಹಿರಿಯ ಪತ್ರಕರ್ತರು)

ಮಲೈ ಭಟ್ಟಾಚಾರ್ಯ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ಬೆಜವಾಡ ವಿಲ್ಸನ್‌ (ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರು)

ತ್ರಿಲೋಚನಾ ಶಾಸ್ತ್ರಿ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ದಿನೇಶ್‌ ಅಮೀನ್‌ ಮಟ್ಟು (ಹಿರಿಯ ಪತ್ರಕರ್ತರು)

ಅಭಯ್‌ (ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ)

ಇಂಧೂದರ ಹೊನ್ನಾಪುರ (ಹಿರಿಯ ಪತ್ರಕರ್ತರು)

ಬಿ.ಟಿ ವೆಂಕಟೇಶ್‌ (ಹಿರಿಯ ವಕೀಲರು)

ಸೈಲ್‌ ಶೆಟ್ಟಿ (ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಮಾಜಿ ಕಾರ್ಯದರ್ಶಿಗಳು)

ಎಸ್‌.ಆರ್‌ ಹೀರೇಮಠ್‌ (ಅಧ್ಯಕ್ಷರು, ಸಿಟಿಜನ್ ಡೆಮಾಕ್ರಸಿ)

ದೇವನೂರು ಮಹಾದೇವ (ಹಿರಿಯ ಬರಹಗಾರರು, ಪದ್ಮಶ್ರೀ ಪುರಸ್ಕೃತರು)


ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...