Homeಚಳವಳಿಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ನ್ಯಾಯದ ದಿನವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ ಎಂದು ಹೇಳಿಕೆಯಲ್ಲಿ ದೇವನೂರು ಮಹಾದೇವರವರು ತಿಳಿಸಿದ್ದಾರೆ.

- Advertisement -
- Advertisement -

ಮೇ 16ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಆನಂದ್ ತೇಲ್ತುಂಬ್ಡೆ ಮತ್ತಿತರ ಚಿಂತಕರ ಬೆಂಬಲಕ್ಕೆ ನಿಲ್ಲೋಣ ಎಂದು ದೇವನೂರು ಮಹಾದೇವರವರು ಕರೆ ನೀಡಿದ್ದಾರೆ.

ಈ ಕುರಿತು 35 ಚಿಂತಕರ, ಹೋರಾಟಗಾರರ, ಪತ್ರಕರ್ತರ ಸಹಿಯುಳ್ಳ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ಒಂದು ತಿಂಗಳಾಗುತ್ತದೆ. ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ. ಅವರೊಂದಿಗೆ ಹಾಗು ಭೀಮಾಕೋರೆಗಾವ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿಂತಕರೊಂದಿಗೆ ನಾವಿದ್ದೀವಿ ಎನ್ನುವುದನ್ನು ವ್ಯಕ್ತಪಡಿಸಲು ಮೇ 16 ರಂದು ನಾವೆಲ್ಲರೂ ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಮನವಿ ಮಾಡಿಕೊಳ್ಳುತ್ತೇವೆ.

ಡಾ. ತೆಲ್ತುಂಬ್ಡೆಯವರು ಇಂದು ನ್ಯಾಯದ ಒಂದು ರಾಷ್ಟ್ರೀಯ ಸಂಕೇತವಾಗಿದ್ದಾರೆ. ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಬಡ ದಲಿತ ಕುಟುಂಬದಲ್ಲಿ ಹುಟ್ಟಿದರು. ಪೇಂಟರ್ ಆಗಿ ದುಡಿದು ವಿದ್ಯಾಭ್ಯಾಸ ಮಾಡಿದರು. ನಂತರ ಮೆಕಾನಿಕಲ್‌ ಇಂಜಿನಿಯರ್ ಆದವರು. ಆಮೇಲೆ ಸೈಬರ್‌ ನೆಟಿಕ್ಸ್‌ನಲ್ಲಿ ಡಾಕ್ಟರೇಟ್ ಮಾಡಿದರು. ಅಹಮದಾಬಾದಿನ ಐಐಎಂನಲ್ಲಿ ಎಂಬಿಎ ಮುಗಿಸಿದರು. ದೇಶದಲ್ಲಿ ಡೇಟಾ ಅನಾಲಿಸಿಸ್ ಪ್ರಾರಂಭಿಸಿದ ಪ್ರಮುಖರಲ್ಲಿ ಅವರೂ ಒಬ್ಬರು. ಸಾರ್ವಜನಿಕ ಸ್ವಾಮ್ಯದ ಪೆಟ್ರೊನೆಟ್ ಇಂಡಿಯ ಕಂಪೆನಿಯಲ್ಲಿ ನಿರ್ವಾಹಕ ನಿರ್ದೇಶಕರು ಮತ್ತು ಸಿಇಒ ಆಗಿದ್ದರು. ಐಐಟಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬಂಧನವಾಗುವ ಸಮಯದಲ್ಲಿ ಗೋವಾ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟಿನಲ್ಲಿ ಬಿಗ್ ಡೇಟಾ ಅನಲಿಟಿಕ್ಸ್‌ನಲ್ಲಿ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿದ್ದರು. ಇವರು, ಬಾಬಾಸಾಹೇಬರ ಮೊಮ್ಮಗಳನ್ನು ಮದುವೆ ಆಗಿದ್ದಾರೆ.  ಜೊತೆಗೆ ತೇಲ್ತುಂಬ್ಡೆಯವರ ಬದುಕೂ ಕೂಡ ಬಾಬಾಸಾಹೇಬ್ ಅಂಬೇಡ್ಕರರ ಬದುಕನ್ನೇ ನೆನಪಿಸುತ್ತದೆ.

ಕಳೆದ ಎರಡು ದಶಕಗಳಲ್ಲಿ ತೆಲ್ತುಂಬ್ಡೆ ಭಾರತದ ಸಾಮಾಜಿಕ ನ್ಯಾಯದ ವಿಷಯದಲ್ಲಿ ಸುಸಂಬದ್ಧ ಹಾಗೂ ಗೌರವಯುತ ದನಿಯಾಗಿದ್ದಾರೆ. ತಮ್ಮ ಬರಹಗಳು ಹಾಗೂ ಸಾಮಾಜಿಕ ಮುಖಾಮುಖಿಯ ಮೂಲಕ ಜಾತಿ  ಹಾಗೂ ಇನ್ನಿತರ ಶೋಷಣೆಯ ಸ್ವರೂಪಗಳ ವಿರುದ್ಧ ಧ್ವನಿಯೆತ್ತಿದ್ದಾರೆ. ಅದರ ಜೊತೆಯಲ್ಲೇ ಎಲ್ಲಾ ರೀತಿಯ ಕುರುಡು ನಂಬಿಕೆಗಳು ಹಾಗೂ ಸಾಂಪ್ರದಾಯಿಕತೆಯನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಚಿಂತನೆಗಳ ಮೂಲಕ ಬಾಬಾಸಾಹೇಬರ ವಿಚಾರಗಳನ್ನು ಪ್ರತಿಪಾದಿಸುತ್ತಾ ಮತ್ತು ಅವುಗಳನ್ನು ವಿಸ್ತರಿಸುತ್ತಾ ಸಾಗಿದ್ದಾರೆ. ಅದರ ಜೊತೆಗೆ ಅವರು ಡಾ.ಅಂಬೇಡ್ಕರರನ್ನು ದೇವರನ್ನಾಗಿ ಮಾಡುವ ಪ್ರಯತ್ನದ ವಿರುದ್ಧವು ನಮ್ಮನ್ನು ಎಚ್ಚರಿಸುತ್ತಿದ್ದಾರೆ. ಸಾಮಾಜಿಕ ನ್ಯಾಯವನ್ನು ಕುರಿತಂತೆ ನಮ್ಮ ಚಿಂತನೆಯ ಪರಿಧಿಯನ್ನೇ ಅವರು ವಿಸ್ತರಿಸಿದ್ದಾರೆ ಎನ್ನಬಹುದು. ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಮಾನವ ಹಕ್ಕುಗಳ ಬಗ್ಗೆ ಅವರದು ಉತ್ಕಟವಾದ ಬದ್ಧತೆ. ಆ ಬದ್ಧತೆಯಿಂದಾಗಿಯೇ ಅವರು ಈಗಿರುವ ಸರ್ಕಾರವೂ ಸೇರಿದಂತೆ ಎಲ್ಲಾ ಸರ್ಕಾರಗಳ ನೀತಿಗಳನ್ನು ನಿಷ್ಠುರವಾಗಿ ಪ್ರಶ್ನಿಸಿತ್ತಾ ಬಂದಿದ್ದಾರೆ. ಬಾಬಾಸಾಹೇಬರ ಹುಟ್ಟುಹಬ್ಬದಂದೇ ಅವರು ಬಂಧನಕ್ಕೆ ಒಳಗಾಗಿರುವುದು ಇಂದಿನ ಶೋಷಕ ವ್ಯವಸ್ಥೆಯ ಮೂಲವನ್ನು ಅವರು ಅಂಬೇಡ್ಕರ್‌ರಂತೆಯೇ ಕಟುವಾಗಿ ಟೀಕಿಸುತ್ತಿರುವುದೆ ಕಾರಣ ಎಂಬ ತೀರ್ಮಾನಕ್ಕೆ ನಾವು ಬರುವಂತಾಗಿದೆ.

ನ್ಯಾಯದ ಸಂಕೇತವಾಗಿದ್ದ ಇಂತಹ ವ್ಯಕ್ತಿ ಇಂದು ಅನ್ಯಾಯದ ವ್ಯವಸ್ಥೆಯ ಬಂಧಿಯಾಗಿರುವುದು ಒಂದು ದೊಡ್ಡ ದುರಂತ. ತೇಲ್ತುಂಬ್ಡೆಯವರು ಬದುಕಿಡೀ ಹಿಂಸೆ ಮತ್ತು ಬಲಪ್ರಯೋಗವನ್ನು ವಿರೋಧಿಸುತ್ತಾ ಬಂದವರು. ಆದರೀಗ ಅವರ ಮೇಲೆಯೇ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎಂಬ ಆರೋಪ ಹೊರಿಸಲಾಗಿದೆ.  ಇದಕ್ಕೆ ನೆಪವಾದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಕರೆ ನೀಡಿದ್ದವರು ಉನ್ನತ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರು. ತೆಲ್ತುಂಬ್ಡೆಯವರು ಅದರಲ್ಲಿ ಭಾಗವಹಿಸಿಯೂ ಇರಲಿಲ್ಲ. ವಸ್ತುಸ್ಥಿತಿ ಹೀಗಿದ್ದಾಗಲೂ ಇವರು ಸಮಾವೇಶದ ಮೂಲಕ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎನ್ನುವ ಆರೋಪ ಹೊರಿಸಲಾಗಿದೆ. ಇದು ನಿಜಕ್ಕೂ ತುಂಬಾ ಆತಂಕದ ವಿಷಯ. ಅಷ್ಟೇ  ಅಲ್ಲ ಅದು ಒಂದು ಸಣ್ಣ ಪುರಾವೆಯೂ ಇಲ್ಲದೆ ಕೆಲವು ಕ್ಷುಲಕ ಆರೋಪಗಳ ಜೊತೆಗೆ ಪ್ರಧಾನ ಮಂತ್ರಿಯ ಕೊಲೆಯ ಸಂಚಿನ ಆರೋಪವನ್ನೂ ತೇಲ್ತುಂಬ್ಡೆಯವರ ಮೇಲೆ ಹೊರಿಸಲಾಗಿದೆ. ಇದು ನಿಜಕ್ಕೂ ಹಾಸ್ಯಾಸ್ಪದ. ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಿ, ನ್ಯಾಯಯುತ ವಿಚಾರಣೆಯ ಸಾಧ್ಯತೆ ತೆರೆದುಕೊಳ್ಳುತ್ತಿದ್ದಂತಯೇ ಆ ವಿಚಾರಣೆಯನ್ನೇ ಡಿಢೀರನೇ ಮಹಾರಾಷ್ಟ್ರ ಪೋಲಿಸರಿಂದ ರಾಷ್ಟ್ರೀಯ ವಿಚಾರಣಾ ಏಜೆನ್ಸಿಗೆ (ಎನ್.ಐ.ಎ.) ಏಕಪಕ್ಷಿಯವಾಗಿ ಕೈಗೆತ್ತಿಕೊಂಡಿರುವ ಪ್ರಕ್ರಿಯೆ ತೀರ ಅನುಮಾನಸ್ಪದಾಗಿದೆ.  ಈ ಹಿನ್ನಲೆಯಲ್ಲಿ, ಡಾ. ತೇಲ್ತುಂಬ್ಡೆ ಮತ್ತಿತರ ಕಾರ್ಯಕರ್ತರಿಗೆ ನ್ಯಾಯಯುತ ಮುಕ್ತ ವಿಚಾರಗಳಿಂದ ಅವರನ್ನು ವಂಚಲಿಸಕ್ಕಾಗಿಯೇ ಜಾಮೀನು ಸಿಗದ ಹಾಗೂ ನ್ಯಾಯಯುತ ವಿಚಾರಣೆಯೂ ಜರುಗದ ಪೈಶಾಚಿಕ ಯು.ಎ.ಪಿ.ಎ. (UAPA) ಕಾಯ್ದೆಯಡಿ ಬಂಧಿಸಿರುವುದು ಸ್ವಯಂ ಸ್ಪಷ್ಟವಾಗಿದೆ.

ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವ ಇಂದಿನ ಸಂದರ್ಭದಲ್ಲಿ, ಜೈಲಲ್ಲಿರುವ ಅಪರಾಧಿಗಳನ್ನೇ ಕೋವಿಡ್-19 ರ ಸೋಂಕಿನ ವಾತಾವರಣದಿಂದಾಗಿ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಹಿರಿಯರಾದ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎನ್ನಬೇಕಾಗುತ್ತದೆ.

ಸಮಾಜದ ಅನ್ಯಾಯದ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸೆರೆಯಲ್ಲಿರುವ ಡಾ. ತೆಲ್ತುಂಬ್ಡೆ, ಜಗತ್ತಿನಾದ್ಯಂತ ಶೋಷಣೆ ಹಾಗೂ ಅನ್ಯಾಯದ ವಿರುದ್ಧದ ದನಿಯನ್ನು ಪ್ರತಿನಿಧಿಸುತ್ತಾರೆ. ಅದರಿಂದಾಗಿಯೇ ಜಿಜ್ಞಾಸುಗಳು, ಚಿಂತಕರು, ಕಲಾವಿದರು, ಕಾರ್ಯಕರ್ತರು, ಮುಖಂಡರು, ಮತ್ತು ನಾಗರಿಕ ಹಕ್ಕುಗಳ ಸಂಘಟನೆಗಳು ಭಾರತದಲ್ಲಿ ಮತ್ತು ವಿದೇಶಗಳಲ್ಲಿ ಅವರ ಬಂಧನದ ವಿರುದ್ಧ ಧ್ವನಿಯೆತ್ತಿದ್ದಾರೆ. ಅವರಲ್ಲಿ ಪ್ರಮುಖರಾದವರು ಅಮ್ನೆಸ್ಟಿ ಇಂಟರ್ ನ್ಯಾಷನಲ್, ಇಂಡಿಯಾ ಸಿವಿಲ್ ವಾಚ್, ರಿಸ್ಕ್ ನೆಟ್ ವರ್ಕನ ವಿದ್ವಾಂಸರುಗಳು, ಪ್ರೊಫೆಸರ್ ಅಮರ್ತ್ಯ ಸೇನ್, ನೋಮ್‌ಚಾಮ್ಸ್ಕಿ, ಜೀನ್‌ಡ್ರೇಜ್, ಬಿ ಎಲ್ ಮುಂಗೇಕರ್, ಅರುಂಧತಿರಾಯ್, ಅಪರ್ಣಾ ಸೇನ್, ರೋಮಿಲಾಥಾಪರ್, ಪ್ರಭಾತ್ ಪಟ್ನಾಯಕ್, ದೇವಕಿಜೈನ್, ಪ್ರಕಾಶ್‌ಅಂಬೇಡ್ಕರ್, ಮಜದಾರೂವಾಲ  ಮುಂತಾದವರು ಸೇರಿದಂತೆ 5000ಕ್ಕೂ ಹೆಚ್ಚು ಪ್ರಜ್ಘಾವಂತ ನಾಗರಿಕರು ದನಿಯೆತ್ತಿದ್ದಾರೆ.

ಇದಕ್ಕೆ ನಾವೂ ಜತೆಗೂಡಬೇಕಾಗಿದೆ. ಅದಕ್ಕಾಗಿ ಮೇ 16 ನೇ ದಿನವನ್ನು ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಸಲಹೆ ನೀಡುತ್ತೇವೆ. ಡಾ.ತೇಲ್ತುಂಬ್ಡೆ ಮತ್ತು ಅವರೊಡನೆ ಆರೋಪ ಎದುರಿಸುತ್ತಿರುವ ಕಾರ್ಯಕರ್ತರಿಗೆ ನ್ಯಾಯ ದೊರಕಿಸಲು ಒತ್ತಾಯಿಸಲು ಹಾಗೂ ಅವರು ಎತ್ತಿಹಿಡಿದ ಒಂದು ನ್ಯಾಯಯುತ ಸಮಾಜದ ವಿಚಾರವನ್ನು ಬೆಂಬಲಿಸಲು ಮೇ 16 ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ.

ಇಂದು ಕೊರೋನಾ ವೈರಾಣುವಿನ ಪಿಡುಗಿನ ಕಾರಣದಿಂದಾಗಿ ಸಾರ್ವಜನಿಕವಾಗಿ ಸೇರುವುದಕ್ಕೆ ನಿರ್ಬಂಧವಿರುವುದರಿಂದ ಮೇ 16 ರ ನ್ಯಾಯದ ದಿನ ವನ್ನು ಕೆಳಕಂಡಂತೆ ಆಚರಿಸಬಹುದೆಂದು ನಾವು ಪ್ರಸ್ತಾಪಿಸುತ್ತೇವೆ:

1.            ನಮ್ಮ ಎಲ್ಲ ಸಾಮಾಜಿಕ ಮಾಧ್ಯಮದ ಪ್ರೊಫೈಲ್ (ಡಿ.ಪಿ.) ಚಿತ್ರವನ್ನು ಮೇ 16 ರಂದು ಡಾ. ತೇಲ್ತುಂಬ್ಡೆಯವರ ಚಿತ್ರವನ್ನು ಹಾಕಿಕೊಳ್ಳೋಣ.

2.            ನಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಎರಡು ಗಂಟೆಗಳ ಕಾಲ ಸಂಜೆ 4ರಿಂದ 6ರವರೆಗೆ #ಜಸ್ಟಿಸ್4 ತೆಲ್ತುಂಬ್ಡೆ ಆಂದೋಲನವನ್ನು ನಡೆಸೋಣ.

3.            ವೆಬಿನಾರ್ ಮತ್ತು ವರ್ಚುಯಲ್ ಸಭೆಗಳನ್ನು ಸಂಘಟಿಸಿ ಮೇ ತಿಂಗಳ ಎಲ್ಲಾ ದಿನಗಳಲ್ಲೂ ಡಾ. ತೆಲ್ತುಂಬ್ಡೆಯವರ ಹಾಗೂ ಬಾಬಾಸಾಹೇಬ ಅಂಬೇಡ್ಕರರನ್ನು ಓದೋಣ ಮತ್ತು ಚರ್ಚಿಸೋಣ.

ನ್ಯಾಯದ ದಿನ ವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ.

ಸಹಿ

ಜಸ್ಟೀಸ್‌ ಗೋಪಾಲಗೌಡ, (ಸುಪ್ರೀಂ ಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿಗಳು)

ರಾಜ್‌ಮೋಹನ್‌ ಗಾಂಧಿ (ಲೇಖಕರು ಮತ್ತು ಸಂಶೋಧನಾ ಪ್ರಾಧ್ಯಾಪಕರು)

ಪ್ರಶಾಂತ್‌ ಭೂಷಣ್‌ (ಸುಪ್ರೀಂ ಕೋರ್ಟ್‌ ವಕೀಲರು)

ಅಡ್ಮಿರಲ್‌ ರಾಮ್‌ದಾಸ್‌ (ನಿವೃತ್ತ ಭಾರತೀಯ ನೌಕದಳದ ಮುಖ್ಯಸ್ಥರು)

ಅಜಯ್‌ಕುಮಾರ್‌ ಸಿಂಗ್‌ (ಕರ್ನಾಟಕದ ಮಾಜಿ ಪೊಲೀಸ್‌ ಮಹಾನಿರ್ದೇಶಕರು)

ಪ್ರೊ.ಆನಂದ್‌ ಕುಮಾರ್‌ (ಜೆಎನ್‌ಯು ಪ್ರಾಧ್ಯಾಪಕರು)

ಎ.ಎನ್‌ ಯೆಲ್ಲಪ್ಪ ರೆಡ್ಡಿ (ಪರಿಸರವಾದಿಗಳು)

ಅರುಣಾ ರಾಯ್‌ (ಮಜ್ದೂರ್‌ ಕಿಸಾನ್‌ ಶಕ್ತಿ ಸಂಘಟನ್‌ನ ಸ್ಥಾಪಕರು)

ಏಕಾಂತಯ್ಯ (ಕರ್ನಾಟಕದ ಮಾಜಿ ಸಚಿವರು)

ಜಸ್ಟಿಸ್‌ ಎ.ಪಿ ಶಾ (ನಿವೃತ್ತ ಮುಖ್ಯ ನ್ಯಾಯಾಧೀಶರು, ದೆಹಲಿ ಹೈಕೋರ್ಟ್‌)

ಜಸ್ಟಿಸ್‌ ಎಚ್‌.ಎನ್‌ ನಾಗಮೋಹನ್‌ದಾಸ್‌ (ನಿವೃತ್ತ ಮುಖ್ಯ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಕೆ.ಸಿ ರಘು (ಉದ್ಯಮಿಗಳು)

ಕೋದಂಡರಾಮಯ್ಯ (ಮಾಜಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌)

ಕೃಷ್ಣ ಕೆ.ಆರ್‌ ಪೇಟೆ (ಮಾಜಿ ವಿಧಾನಸಭಾ ಸ್ಪೀಕರ್‌)

ಕುಮಾರ್‌ ಪ್ರಶಾಂತ್‌ (ಅಧ್ಯಕ್ಷರು, ಗಾಂಧೀ ಪೀಸ್‌ ಫೌಂಡೇಶನ್‌)

ಮರಿಸ್ವಾಮಿ (ಮಾಜಿ ಡೈರಕ್ಟರ್‌ ಜನರಲ್‌ ಆಫ್‌ ಪೊಲೀಸ್‌, ಕರ್ನಾಟಕ)

ಎಸ್‌.ಕೆ ಕಾಂತ (ಕಾರ್ಮಿಕ ಮುಖಂಡರು ಮತ್ತು ಮಾಜಿ ಸಚಿವರು)

ಸುಹಾಸ್‌ ಪಲ್ಸಿಕರ್‌ (ನಿವೃತ್ತ ಪ್ರಾಧ್ಯಾಪಕರು, ಸಾಹಿತ್ಯ ಅಕಾಡೆಮಿ ವಿಜೇತರು)

ವಾಜಹತ್‌ ಹಬೀಬುಲ್ಲ (ಮಾಜಿ ಮುಖ್ಯ ಮಾಹಿತಿ ಆಯುಕ್ತರು)

ಯೋಗೇಂದ್ರ ಯಾದವ್‌ (ಅಧ್ಯಕ್ಷರು, ಸ್ವರಾಜ್‌ ಇಂಡಿಯಾ)

ಜಸ್ಟೀಸ್‌ ಎ.ಜೆ ಸದಾಶಿವ (ನಿವೃತ್ತ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಪ್ರೊ.ರವಿವರ್ಮಕುಮಾರ್‌ (ಮಾಜಿ ಅಡ್ವೋಕೇಟ್‌ ಜನರಲ್‌, ಕರ್ನಾಟಕ)

ಸುಗತ ರಾಜು (ಹಿರಿಯ ಪತ್ರಕರ್ತರು)

ಮಲೈ ಭಟ್ಟಾಚಾರ್ಯ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ಬೆಜವಾಡ ವಿಲ್ಸನ್‌ (ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರು)

ತ್ರಿಲೋಚನಾ ಶಾಸ್ತ್ರಿ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ದಿನೇಶ್‌ ಅಮೀನ್‌ ಮಟ್ಟು (ಹಿರಿಯ ಪತ್ರಕರ್ತರು)

ಅಭಯ್‌ (ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ)

ಇಂಧೂದರ ಹೊನ್ನಾಪುರ (ಹಿರಿಯ ಪತ್ರಕರ್ತರು)

ಬಿ.ಟಿ ವೆಂಕಟೇಶ್‌ (ಹಿರಿಯ ವಕೀಲರು)

ಸೈಲ್‌ ಶೆಟ್ಟಿ (ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಮಾಜಿ ಕಾರ್ಯದರ್ಶಿಗಳು)

ಎಸ್‌.ಆರ್‌ ಹೀರೇಮಠ್‌ (ಅಧ್ಯಕ್ಷರು, ಸಿಟಿಜನ್ ಡೆಮಾಕ್ರಸಿ)

ದೇವನೂರು ಮಹಾದೇವ (ಹಿರಿಯ ಬರಹಗಾರರು, ಪದ್ಮಶ್ರೀ ಪುರಸ್ಕೃತರು)


ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...