Homeಕರ್ನಾಟಕಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

- Advertisement -
- Advertisement -

‘ಪೊಲೀಸರು ತಮ್ಮ ಇಚ್ಛೆಗೆ ಅನುಗುಣವಾಗಿ ಕರೆ ವಿವರ ದಾಖಲೆ (ಸಿಡಿಆರ್‌) ಪಡೆಯುವ ಅಧಿಕಾರ ಚಲಾಯಿಸುತ್ತಾ ಹೋದರೆ, ಅದು ಪೊಲೀಸ್ ರಾಜ್ಯವಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.

‘ನಾನು ಪೊಲೀಸ್‌ ಅಧಿಕಾರಿಯಾಗಿದ್ದೇನೆ ಎಂಬ ಅಧಿಕಾರದ ಏಕೈಕ ಗತ್ತಿನಲ್ಲಿ, ಯಾವುದೇ ಪೊಲೀಸ್ ಅಧಿಕಾರಿ, ಯಾವುದೇ ವ್ಯಕ್ತಿಯ ಮೊಬೈಲ್ ಫೋನ್‌ನ ಸಿಡಿಆರ್‌ ಅನ್ನು ಕಾನೂನುಬದ್ಧ ತನಿಖಾ ಅಗತ್ಯದ ಅನುಮತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ’ ಎಂದು ಗುರುವಾರ ಸ್ಪಷ್ಟಪಡಿಸಿದೆ.

ಮಹಿಳೆಯೊಬ್ಬರ ಸಿಡಿಆರ್ ಅನ್ನು ಅಕ್ರಮವಾಗಿ ಪಡೆದ ಆರೋಪ ಎದುರಿಸುತ್ತಿರುವ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಎಂ.ವಿ ವಿದ್ಯಾ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿದಾರರ ಪರ ವಕೀಲ ಸತ್ಯನಾರಾಯಣ್ ಚಾಲ್ಕೆ ವಾದ ಮಂಡಿಸಿ, “ವಿದ್ಯಾ ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್‌ 197 (ಸಾರ್ವಜನಿಕ ಸೇವಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ತಡೆಯುವ) ಮತ್ತು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 170ರ (ಸಾರ್ವಜನಿಕ ನೌಕರನ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಮತ್ತು ವಿಚಾರಣೆಗೆ ಒಳಪಡಿಸಲು ಅಗತ್ಯವಿರುವ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ) ಅಡಿಯಲ್ಲಿ, ಅನುಮತಿಯ ಆದೇಶವಿಲ್ಲದೆ ಸಿಡಿಆರ್‌ ಕೋರಿದ್ದಾರೆ” ಎಂದು ಪೀಠಕ್ಕೆ ಮನದಟ್ಟು ಮಾಡಲು ಪ್ರಯತ್ನಿಸಿದ್ದರು.

ಆದರೆ, ಇದನ್ನು ಒಪ್ಪದ ಪೀಠವು, “ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಕನ್ನಡಿಗ ದಿವಂಗತ ಪುಟ್ಟಸ್ವಾಮಿ ಪ್ರಕರಣದಲ್ಲಿ ಸ್ಪಷ್ಟಪಡಿಸಿರುವಂತೆ, ಯಾವುದೇ ವ್ಯಕ್ತಿಯ ಸಿಡಿಆರ್ ದಾಖಲೆಗಳು ಗೋಪ್ಯತೆಯ ಹಕ್ಕಿನಿಂದ ನಿಯಂತ್ರಿಸಲಾಗುವ ವೈಯಕ್ತಿಕ ಮತ್ತು ಖಾಸಗಿ ವಿವರಗಳಾಗಿವೆ. ಹೀಗಾಗಿ, ನಿರ್ದಿಷ್ಟ ವ್ಯಕ್ತಿಯ ಸಿಡಿಆರ್ ಪಡೆಯುವ ಅಧಿಕಾರವನ್ನು ತನಿಖಾ ಅಧಿಕಾರಿ ಮಾತ್ರ ಚಲಾಯಿಸಬೇಕಾಗುತ್ತದೆ” ಎಂಬ ಅಂಶವನ್ನು ಉಲ್ಲೇಖಿಸಿದೆ.

“ಐಪಿಸಿ ಸೆಕ್ಷನ್‌ಗಳಾದ 354(ಡಿ) 409, 506, 509 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 66(ಡಿ) ಮತ್ತು 66(ಇ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು” ಎಂದು ಅರ್ಜಿದಾರರು ಕೋರಿದ್ದರು.

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...