Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...