Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...