Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...