Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...