Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...