Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...