Homeಅಂತರಾಷ್ಟ್ರೀಯಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

ಅಮೆಜಾನ್ ಕಾಡು ಉಳಿಸಲು ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

#SaveTheAmazon ಎಂದು ಟ್ವೀಟ್ ಮಾಡಿ ಟ್ರೆಂಡ್ ಮಾಡಿದರೆ ದೊಡ್ಡ ಪ್ರಯೋಜನ ಆಗುವುದಿಲ್ಲ. ಇದು 1 ಲೈಕ್ = 1 ಪ್ರಾರ್ಥನೆ ಮಾಡಿದ ಹಾಗಾಗುತ್ತದೆ ಅಷ್ಟೇ. ದೆಹಲಿಯಲ್ಲಿರುವವರು ಅಮೆಜಾನ್ ಕಾಡು ಉಳಿಸಲು ಒತ್ತಾಯಿಸಿ ಆಗಸ್ಟ್ 30ರಂದು ದೆಹಲಿಯಲ್ಲಿ ಬ್ರೆಜಿಲ್ ಎಂಬೆಸ್ಸಿ ಮುತ್ತಿಗೆ ಹಾಕುವ ಅಹಿಂಸಾತ್ಮಾಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಯುವ ಚಿಂತಕ ಧೃವ್ ರಾಠೀ ಮನವಿ ಮಾಡಿದ್ದಾರೆ.

ದೆಹಲಿಯ ಹೊರಗೆ ಇರುವ ಅನೇಕ ಜನರು ಕೇಳುತ್ತಿದ್ದಾರೆ, ಅಮೇಜಾನ್ ಕಾಡಿಗೆ ಬೆಂಕಿ ಬಿದ್ದಿರುವುದರ ವಿರುದ್ಧ ನಾವು ಏನು ಮಾಡಬಹುದು ಅಂತ. ಅಮೆಜಾನ್ ಉಳಿಸುವ ಬಗ್ಗೆ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲು ದಯವಿಟ್ಟು ನಿಮ್ಮ ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ಮತ್ತು ಭಾರತದ ರಾಷ್ಟ್ರಪತಿಯನ್ನು ಉದ್ದೇಶಿಸಿ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿ. ಬ್ರೆಜಿಲ್ ಮತ್ತು ಭಾರತ ದೇಶಗಳೆರಡು ಬ್ರಿಕ್ಸ್, ಬೇಸಿಕ್, ಜಿ -20, ಜಿ -4, ಐಬಿಎಸ್ಎ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಭಾಗವಾಗಿರುವುದರಿಂದ ಉತ್ತಮ ಸಂಬಂಧವನ್ನು ಹೊಂದಿವೆ. ಹಾಗಾಗಿ ಭಾರತ ಸರ್ಕಾರವು ಬ್ರೆಜೆಲ್ ಅನ್ನು ಒತ್ತಾಯಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂಮಿಯ ಶ್ವಾಸಕೋಶಗಳು ಎಂದು ಕರೆಸಿಕೊಳ್ಳುವ ಅಮೆಜಾನ್ ಕಾಡು 3 ವಾರಗಳಿಗಿಂತ ಹೆಚ್ಚು ಕಾಲ ಬೆಂಕಿಯಲ್ಲಿದೆ. ವಿಶ್ವದ ಒಟ್ಟು ಆಮ್ಲಜನಕದ ಹೆಚ್ಚಿನ ಭಾಗವನ್ನು ದಕ್ಷಿಣ ಅಮೆರಿಕದ ಅಮೆಜಾನ್ ಜಲಾನಯನ ಪ್ರದೇಶದಿಂದ ಮಾತ್ರ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಭಾರತೀಯರಾದ ನಾವು ಕೂಡ ಅಮೆಜಾನ್ ಉಳಿಸಿಕೊಳ್ಳಲು ಹೋರಾಡಬೇಕಿದೆ ಎಂದಿದ್ದಾರೆ.

ಇಂದು ಮಾನವ ಪ್ರಭೇದಗಳು ಗನ್‌ಪೌಡರ್ ರಾಶಿಯ ಮೇಲೆ ಕುಳಿತು ಅದನ್ನು ಬೆಂಕಿಯಿಡಲು ಹೊಸ ಮಾರ್ಗಗಳನ್ನು ಆವಿಷ್ಕರಿಸುತ್ತಿವೆ. ಸಾಮೂಹಿಕ ಆತ್ಮಹತ್ಯೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಕಾಣಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆಜಾನ್‌ನ ಕಾಡುಗಳು ಮಾತ್ರ ವಿಶ್ವದ ಆಮ್ಲಜನಕದ ಗಮನಾರ್ಹ ಪ್ರಮಾಣವನ್ನು ಸೃಷ್ಟಿಸುತ್ತವೆ. ವಾತಾವರಣದಿಂದ ಆಮ್ಲಜನಕದಲ್ಲಿ ಅಷ್ಟು ಇಳಿಕೆ ಇದ್ದರೆ, ಗ್ರಹದಲ್ಲಿ ಒಟ್ಟು ಆಮ್ಲಜನಕದ ಸಾಂದ್ರತೆಯು ಸಾರ್ವಕಾಲಿಕ ಕಡಿಮೆಯಾಗುತ್ತದೆ. ಪರಿಣಾಮಗಳು ಹೀಗಿವೆ:
1. ನಾವು ಗಮನ ಕೇಂದ್ರೀಕರಿಸಲು ಮತ್ತು ಯೋಚಿಸಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತೇವೆ ಮತ್ತು ನಂತರ ಅದು ಉಸಿರಾಟಕ್ಕೆ ಕಷ್ಟವಾಗುತ್ತದೆ
2. ಧೂಮಪಾನಿಗಳು ಮತ್ತು ಶ್ವಾಸಕೋಶ ಮತ್ತು ರಕ್ತದ ಸಮಸ್ಯೆಗಳಿರುವ ಜನರು ತಮ್ಮ ಆರೋಗ್ಯ ಸಮಸ್ಯೆ ಏನು ಎಂದು ತಿಳಿಯುವ ಮೊದಲೇ ಸಾಯುತ್ತಾರೆ.
4. ಅಮೇಜಾನ್ ದಹನದಿಂದಾಗಿ ತಕ್ಷಣವೇ ಮಾರಕವಾಗದಿದ್ದರೂ, ಕಡಿಮೆ ಆಮ್ಲಜನಕದ ಕಾರಣದಿಂದ ಹೆಚ್ಚಿನ ಪ್ರಾಣಿಗಳ ಜೀವಕ್ಕೆ ವಿನಾಶಕಾರಿಯಾಗಬಹುದು ಎಂದು ದೆಹಲಿ ನಿವಾಸಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿರುವ ಆದಿಲ್ ಅಮನ್ ತಿಳಿಸಿದ್ದಾರೆ.

ನಾವು 30/08/2019 ರಂದು ಮಧ್ಯಾಹ್ನ 3 ಗಂಟೆಗೆ ಇಂಡಿಯಾ ಗೇಟ್‌ನಿಂದ ಶಾಂತಿಯುತ ಮೆರವಣಿಗೆ ಕೈಗೊಳ್ಳುತ್ತೇವೆ ಮತ್ತು ಅಮೆಜಾನ್ ಕಾಡಿನ ಸುತ್ತಮುತ್ತಲಿನ ದೇಶಗಳ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸುತ್ತೇವೆ!
ಭೂಮಿಯನ್ನು ಉಳಿಸುವ ಈ ಪ್ರಯತ್ನದಲ್ಲಿ ನೀವು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...