Homeಕರ್ನಾಟಕ‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ನಡೆಯುತ್ತಿರುವ ಕೆಲವು ಪ್ರಮುಖ ಯೋಜನೆಗಳ ಕೆಲಸವನ್ನು ಅಕ್ಟೋಬರ್‌‌‌‌ 31 ರ ಒಳಗೆ ಪೂರ್ಣಗೊಳಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಡುವನ್ನು ನಿಗದಿಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌‌ ಅವರು,“ಅಕ್ಟೋಬರ್ 14 ರಂದು ಬಿಬಿಎಂಪಿ ಯೋಜನಾ ವಿಭಾಗದ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ” ಎಂದು ಶುಕ್ರವಾರ ಹೇಳಿದ್ದಾರೆ.

“ಮುಂಬರುವ ಹಬ್ಬದ ಸೀಸನ್ ಮತ್ತು ನಗರದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಭೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಕೆಲವು ಪ್ರಮುಖ ಚಾಲ್ತಿಯಲ್ಲಿರುವ ಯೋಜನೆಗಳನ್ನು ಗುರುತಿಸಿದ್ದೇವೆ. ಅಕ್ಟೋಬರ್ 31, 2022 ಅಥವಾ ಅದಕ್ಕೂ ಮೊದಲು ತ್ವರಿತವಾಗಿ ಪೂರ್ಣಗೊಳಿಸಲಾಗುವುದು” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿವಾನಂದ ವೃತ್ತದಿಂದ ರೇಸ್ ಕೋರ್ಸ್ ಜಂಕ್ಷನ್ ಮೇಲ್ಸೇತುವೆವರೆಗಿನ ಕಾಮಗಾರಿಯು ಅಕ್ಟೋಬರ್ 23 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಶಿವಾನಂದ ಸರ್ಕಲ್ ಮೇಲ್ಸೇತುವೆಯನ್ನು ಆಗಸ್ಟ್‌ನಲ್ಲಿ ಸಾರ್ವಜನಿಕರಿಗೆ ಭಾಗಶಃ ತೆರೆಯಲಾಗಿದೆ. ಆದಾಗ್ಯೂ, ಪ್ರಯಾಣಿಕರಿಂದ ದೂರುಗಳು ಬಂದ ನಂತರ ಬಿಬಿಎಂಪಿ ಅಧಿಕಾರಿಗಳು ಸೆಪ್ಟೆಂಬರ್‌ನಲ್ಲಿ ಅದನ್ನು ಮುಚ್ಚಿದ್ದರು.

ಮೋಹನ್ ಕುಮಾರ್ ರಸ್ತೆಯಲ್ಲಿ ಮತ್ತಿಕೆರೆ ಮುಖ್ಯರಸ್ತೆ ಜಂಕ್ಷನ್‌ನಿಂದ ರೈಲ್ವೆ ಸಮಾನಾಂತರ ರಸ್ತೆ ಜಂಕ್ಷನ್‌ವರೆಗೆ ನಡೆಯುತ್ತಿರುವ ಕಾಮಗಾರಿಯನ್ನು ಅಕ್ಟೋಬರ್ 31 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಇದಲ್ಲದೆ, ದೊಮ್ಮಲೂರು ಮೇಲ್ಸೇತುವೆಯಿಂದ ಈಜಿಪುರದವರೆಗಿನ ಮಧ್ಯಂತರ ರಿಂಗ್ ರಸ್ತೆ ಮತ್ತು ಎನ್‌ಆರ್ ರಸ್ತೆ ಟೆಂಡರ್ ಶ್ಯೂರ್‌ ಅಕ್ಟೋಬರ್ 31 ರೊಳಗೆ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿಯ ಮುಖ್ಯ ಎಂಜಿನಿಯರ್‌ ತಿಳಿಸಿದ್ದಾರೆ.

ಅಕ್ಟೋಬರ್ 9 ರಂದು, ಬೆಂಗಳೂರಿನ ಕುಂದಲಹಳ್ಳಿ ಅಂಡರ್‌ಪಾಸ್‌ನಲ್ಲಿನ ಸರ್ವೀಸ್ ರಸ್ತೆಯ ಒಂದು ಭಾಗವು ಉದ್ಘಾಟನೆಗೊಂಡ ನಾಲ್ಕೇ ತಿಂಗಳ ಅಂತರದಲ್ಲಿ ಕುಸಿದಿತ್ತು. ರಸ್ತೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...