Homeಕರ್ನಾಟಕ‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ನಡೆಯುತ್ತಿರುವ ಕೆಲವು ಪ್ರಮುಖ ಯೋಜನೆಗಳ ಕೆಲಸವನ್ನು ಅಕ್ಟೋಬರ್‌‌‌‌ 31 ರ ಒಳಗೆ ಪೂರ್ಣಗೊಳಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಡುವನ್ನು ನಿಗದಿಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌‌ ಅವರು,“ಅಕ್ಟೋಬರ್ 14 ರಂದು ಬಿಬಿಎಂಪಿ ಯೋಜನಾ ವಿಭಾಗದ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ” ಎಂದು ಶುಕ್ರವಾರ ಹೇಳಿದ್ದಾರೆ.

“ಮುಂಬರುವ ಹಬ್ಬದ ಸೀಸನ್ ಮತ್ತು ನಗರದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಭೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಕೆಲವು ಪ್ರಮುಖ ಚಾಲ್ತಿಯಲ್ಲಿರುವ ಯೋಜನೆಗಳನ್ನು ಗುರುತಿಸಿದ್ದೇವೆ. ಅಕ್ಟೋಬರ್ 31, 2022 ಅಥವಾ ಅದಕ್ಕೂ ಮೊದಲು ತ್ವರಿತವಾಗಿ ಪೂರ್ಣಗೊಳಿಸಲಾಗುವುದು” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿವಾನಂದ ವೃತ್ತದಿಂದ ರೇಸ್ ಕೋರ್ಸ್ ಜಂಕ್ಷನ್ ಮೇಲ್ಸೇತುವೆವರೆಗಿನ ಕಾಮಗಾರಿಯು ಅಕ್ಟೋಬರ್ 23 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಶಿವಾನಂದ ಸರ್ಕಲ್ ಮೇಲ್ಸೇತುವೆಯನ್ನು ಆಗಸ್ಟ್‌ನಲ್ಲಿ ಸಾರ್ವಜನಿಕರಿಗೆ ಭಾಗಶಃ ತೆರೆಯಲಾಗಿದೆ. ಆದಾಗ್ಯೂ, ಪ್ರಯಾಣಿಕರಿಂದ ದೂರುಗಳು ಬಂದ ನಂತರ ಬಿಬಿಎಂಪಿ ಅಧಿಕಾರಿಗಳು ಸೆಪ್ಟೆಂಬರ್‌ನಲ್ಲಿ ಅದನ್ನು ಮುಚ್ಚಿದ್ದರು.

ಮೋಹನ್ ಕುಮಾರ್ ರಸ್ತೆಯಲ್ಲಿ ಮತ್ತಿಕೆರೆ ಮುಖ್ಯರಸ್ತೆ ಜಂಕ್ಷನ್‌ನಿಂದ ರೈಲ್ವೆ ಸಮಾನಾಂತರ ರಸ್ತೆ ಜಂಕ್ಷನ್‌ವರೆಗೆ ನಡೆಯುತ್ತಿರುವ ಕಾಮಗಾರಿಯನ್ನು ಅಕ್ಟೋಬರ್ 31 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಇದಲ್ಲದೆ, ದೊಮ್ಮಲೂರು ಮೇಲ್ಸೇತುವೆಯಿಂದ ಈಜಿಪುರದವರೆಗಿನ ಮಧ್ಯಂತರ ರಿಂಗ್ ರಸ್ತೆ ಮತ್ತು ಎನ್‌ಆರ್ ರಸ್ತೆ ಟೆಂಡರ್ ಶ್ಯೂರ್‌ ಅಕ್ಟೋಬರ್ 31 ರೊಳಗೆ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿಯ ಮುಖ್ಯ ಎಂಜಿನಿಯರ್‌ ತಿಳಿಸಿದ್ದಾರೆ.

ಅಕ್ಟೋಬರ್ 9 ರಂದು, ಬೆಂಗಳೂರಿನ ಕುಂದಲಹಳ್ಳಿ ಅಂಡರ್‌ಪಾಸ್‌ನಲ್ಲಿನ ಸರ್ವೀಸ್ ರಸ್ತೆಯ ಒಂದು ಭಾಗವು ಉದ್ಘಾಟನೆಗೊಂಡ ನಾಲ್ಕೇ ತಿಂಗಳ ಅಂತರದಲ್ಲಿ ಕುಸಿದಿತ್ತು. ರಸ್ತೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...