Homeಮುಖಪುಟಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

- Advertisement -
- Advertisement -

ತನ್ನ ಅನುಮತಿಯಿಲ್ಲದೆ ದೇಶಾದ್ಯಂತ ಖಾಸಗಿ ಆಸ್ತಿಗಳನ್ನು ನೆಲಸಮ ಮಾಡುವುದನ್ನು ಅಕ್ಟೋಬರ್ 1 ರವರೆಗೆ ನಿಲ್ಲಿಸಬೇಕು ಎಂದು ಸುಪ್ರಿಂಕೋರ್ಟ್‌ ಮಂಗಳವಾರ ಆದೇಶಿಸಿದೆ. ಪ್ರಕರಣಗಳ ಮುಂದಿನ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶವನ್ನು ನೀಡಿದೆ. ಆದಾಗ್ಯೂ, ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸಲು ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಬುಲ್ಡೋಜರ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ನೀಡಿದ ಈ ಆದೇಶಕ್ಕೆ ಆಕ್ಷೇಪ ಎತ್ತಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಾಸನಬದ್ಧ ಅಧಿಕಾರಿಗಳ ಕೈಗಳನ್ನು ಈ ರೀತಿ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ಎರಡು ವಾರಗಳ ಕಾಲ ಕೆಡವುವುದನ್ನು ನಿಲ್ಲಿಸಿದರೆ ಸ್ವರ್ಗ ಕುಸಿಯುವುದಿಲ್ಲ. ನಿಮ್ಮ ಹಾಗೆ ಇರಿ, 15 ದಿನಗಳಲ್ಲಿ ಏನಾಗುತ್ತದೆ?” ಎಂದು ಕೇಳಿದ್ದಾರೆ.

“ಮುಂದಿನ ದಿನಾಂಕದವರೆಗೆ ಈ ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ಆಸ್ತಿಗಳನ್ನು ಕೆಡವಬಾರದು. ಆದರೆ ಸಾರ್ವಜನಿಕ ಬೀದಿಗಳು, ಫುಟ್‌ಪಾತ್‌ಗಳು, ರೈಲ್ವೆ ಮಾರ್ಗಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ನಿರ್ಮಾಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

ಸಂವಿಧಾನದ 142ನೇ ಪರಿಚ್ಛೇದದ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಅನ್ವಯಿಸುವ ಮೂಲಕ ತಾನು ಈ ನಿರ್ದೇಶನವನ್ನು ನೀಡಿದ್ದೇನೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸೇರಿದ ಖಾಸಗಿ ಕಟ್ಟಡಗಳನ್ನು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಶಿಕ್ಷಾರ್ಹ ಕ್ರಮವಾಗಿ ಕೆಡವಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

ಸೆಪ್ಟೆಂಬರ್ 2 ರಂದು ನ್ಯಾಯಾಲಯ ಮಾಡಿದ ಟೀಕೆಗಳ ನಂತರವೂ ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡ ಮತ್ತು ವೈಭವೀಕರಿಸಿದ ಸಚಿವರು ಮತ್ತು ವಿವಿಧ ರಾಜಕಾರಣಿಗಳನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿತು. “ಆದೇಶದ ನಂತರ ಕೂಡಾ ಬುಲ್ಡೋಜರ್ ಮುಂದುವರಿಯುತ್ತದೆ ಎಂದು ಹೇಳಿಕೆಗಳು ಬಂದಿವೆ…” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದದ್ದಾರೆ.

“ಸೆಪ್ಟೆಂಬರ್ 2 ರ ನಂತರ ಕೂಡಾ ಇಂತಹ ನಿಲುವು ಮತ್ತು ಸಮರ್ಥನೆ ಕಂಡುಬಂದಿದೆ. ಇದು ನಮ್ಮ ದೇಶದಲ್ಲಿ ಆಗಬೇಕೇ? ಚುನಾವಣಾ ಆಯೋಗವು ಗಮನಿಸಬೇಕೇ? ನಾವು ನಿರ್ದೇಶನಗಳನ್ನು ರೂಪಿಸುತ್ತೇವೆ” ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದ್ದಾರೆ. ದೇಶದ ಪುರಸಭೆಯ ಕಾನೂನುಗಳ ಅಡಿಯಲ್ಲಿ ಆಸ್ತಿಗಳನ್ನು ಯಾವಾಗ ಮತ್ತು ಹೇಗೆ ಕೆಡವಬಹುದು ಎಂಬುದರ ಕುರಿತು ನಿರ್ದೇಶನಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.ಬುಲ್ಡೋಜರ್ ದಾಳಿ

ವಿಡಿಯೊ ನೋಡಿ: ಬಾಲಗೋಪಾಲ್ ಅವರ ಬಹಳಷ್ಟು ಲೇಖನಗಳು ಕನ್ನಡಕ್ಕೆ ಬರುವ ಅಗತ್ಯವಿದೆ: ಬಂಜಗೆರೆ ಜಯಪ್ರಕಾಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...