Homeಮುಖಪುಟಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

- Advertisement -
- Advertisement -

ತನ್ನ ಅನುಮತಿಯಿಲ್ಲದೆ ದೇಶಾದ್ಯಂತ ಖಾಸಗಿ ಆಸ್ತಿಗಳನ್ನು ನೆಲಸಮ ಮಾಡುವುದನ್ನು ಅಕ್ಟೋಬರ್ 1 ರವರೆಗೆ ನಿಲ್ಲಿಸಬೇಕು ಎಂದು ಸುಪ್ರಿಂಕೋರ್ಟ್‌ ಮಂಗಳವಾರ ಆದೇಶಿಸಿದೆ. ಪ್ರಕರಣಗಳ ಮುಂದಿನ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶವನ್ನು ನೀಡಿದೆ. ಆದಾಗ್ಯೂ, ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸಲು ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಬುಲ್ಡೋಜರ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ನೀಡಿದ ಈ ಆದೇಶಕ್ಕೆ ಆಕ್ಷೇಪ ಎತ್ತಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಾಸನಬದ್ಧ ಅಧಿಕಾರಿಗಳ ಕೈಗಳನ್ನು ಈ ರೀತಿ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ಎರಡು ವಾರಗಳ ಕಾಲ ಕೆಡವುವುದನ್ನು ನಿಲ್ಲಿಸಿದರೆ ಸ್ವರ್ಗ ಕುಸಿಯುವುದಿಲ್ಲ. ನಿಮ್ಮ ಹಾಗೆ ಇರಿ, 15 ದಿನಗಳಲ್ಲಿ ಏನಾಗುತ್ತದೆ?” ಎಂದು ಕೇಳಿದ್ದಾರೆ.

“ಮುಂದಿನ ದಿನಾಂಕದವರೆಗೆ ಈ ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ಆಸ್ತಿಗಳನ್ನು ಕೆಡವಬಾರದು. ಆದರೆ ಸಾರ್ವಜನಿಕ ಬೀದಿಗಳು, ಫುಟ್‌ಪಾತ್‌ಗಳು, ರೈಲ್ವೆ ಮಾರ್ಗಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ನಿರ್ಮಾಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

ಸಂವಿಧಾನದ 142ನೇ ಪರಿಚ್ಛೇದದ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಅನ್ವಯಿಸುವ ಮೂಲಕ ತಾನು ಈ ನಿರ್ದೇಶನವನ್ನು ನೀಡಿದ್ದೇನೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸೇರಿದ ಖಾಸಗಿ ಕಟ್ಟಡಗಳನ್ನು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಶಿಕ್ಷಾರ್ಹ ಕ್ರಮವಾಗಿ ಕೆಡವಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

ಸೆಪ್ಟೆಂಬರ್ 2 ರಂದು ನ್ಯಾಯಾಲಯ ಮಾಡಿದ ಟೀಕೆಗಳ ನಂತರವೂ ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡ ಮತ್ತು ವೈಭವೀಕರಿಸಿದ ಸಚಿವರು ಮತ್ತು ವಿವಿಧ ರಾಜಕಾರಣಿಗಳನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿತು. “ಆದೇಶದ ನಂತರ ಕೂಡಾ ಬುಲ್ಡೋಜರ್ ಮುಂದುವರಿಯುತ್ತದೆ ಎಂದು ಹೇಳಿಕೆಗಳು ಬಂದಿವೆ…” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದದ್ದಾರೆ.

“ಸೆಪ್ಟೆಂಬರ್ 2 ರ ನಂತರ ಕೂಡಾ ಇಂತಹ ನಿಲುವು ಮತ್ತು ಸಮರ್ಥನೆ ಕಂಡುಬಂದಿದೆ. ಇದು ನಮ್ಮ ದೇಶದಲ್ಲಿ ಆಗಬೇಕೇ? ಚುನಾವಣಾ ಆಯೋಗವು ಗಮನಿಸಬೇಕೇ? ನಾವು ನಿರ್ದೇಶನಗಳನ್ನು ರೂಪಿಸುತ್ತೇವೆ” ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದ್ದಾರೆ. ದೇಶದ ಪುರಸಭೆಯ ಕಾನೂನುಗಳ ಅಡಿಯಲ್ಲಿ ಆಸ್ತಿಗಳನ್ನು ಯಾವಾಗ ಮತ್ತು ಹೇಗೆ ಕೆಡವಬಹುದು ಎಂಬುದರ ಕುರಿತು ನಿರ್ದೇಶನಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.ಬುಲ್ಡೋಜರ್ ದಾಳಿ

ವಿಡಿಯೊ ನೋಡಿ: ಬಾಲಗೋಪಾಲ್ ಅವರ ಬಹಳಷ್ಟು ಲೇಖನಗಳು ಕನ್ನಡಕ್ಕೆ ಬರುವ ಅಗತ್ಯವಿದೆ: ಬಂಜಗೆರೆ ಜಯಪ್ರಕಾಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...