Homeಮುಖಪುಟಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

- Advertisement -
- Advertisement -

ಮೂರು ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ತಲುಪಿರುವ ದೆಹಲಿಯ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿಗೆ ಬಂದಿದೆ. ಅಂದರೆ  ನವೆಂಬರ್‌ 15ರವರೆಗೆ ದೆಹಲಿಯ ಕಾರು ಚಾಲಕರು ವಾರದಲ್ಲಿ ನಾಲ್ಕು ದಿನ ಮಾತ್ರ ತಮ್ಮ ಕಾರುಗಳನ್ನು ಬಳಸಲು ಸಾಧ್ಯವಿದ್ದು ಉಳಿದ ದಿನಗಳಲ್ಲಿ ಬಳಸುವಂತಿಲ್ಲ.

ಬೆಸ-ಸಮ ನಿಯಮಗಳ ಪ್ರಕಾರ, ದಿನಾಂಕ ನವೆಂಬರ್ 4, 6, 8, 12 ಮತ್ತು 14 ರಂದು 1, 3, 5, 7, 9 ರಂತಹ ಬೆಸ ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅದೇ ರೀತಿ, ನವೆಂಬರ್ 5, 7, 9, 11, 13 ಮತ್ತು 15 ರಂದು 0, 2, 4, 6, 8  ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ದೆಹಲಿಯ ರಸ್ತೆಗಿಳಿಯುವಂತಿಲ್ಲ. ನವೆಂಬರ್‌ 10ರ ಭಾನುವಾರ ಮಾತ್ರ ಎಲ್ಲಾ ಕಾರುಗಳು ಸಂಚರಿಸಬಹುದಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ. 4,000 ದಂಡ ವಿಧಿಸಲಾಗುತ್ತದೆ. ಇದು ಬೆಸ-ಸಮ-ಯೋಜನೆಯ ಹಿಂದಿನ ಆವೃತ್ತಿಗಳಲ್ಲಿ ವಿಧಿಸಿದ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಕೆಲಸ ಮಾಡಲು ಅವರ ಕಾರಿನಲ್ಲಿ ತೆರಳಿದರು. “ಕಾರುಗಳನ್ನು ಹಂಚಿಕೊಳ್ಳಿ. ಇದು ಸ್ನೇಹವನ್ನು ಬೆಳೆಸುತ್ತದೆ, ಸಂಬಂಧಗಳನ್ನು ಬಲಪಡಿಸುತ್ತದೆ, ಪೆಟ್ರೋಲ್ ಅನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲಿ ತೆರಳಿದರು.

“ದೆಹಲಿಯಲ್ಲಿ ಪ್ರತಿದಿನ 30 ಲಕ್ಷ ಕಾರುಗಳು ರಸ್ತೆಗಿಳಿಯುತ್ತಿವೆ. ನಿಯಮದಂತೆ ಇಂದು 15 ಲಕ್ಷ ಕಾರುಗಳು ರಸ್ತೆಗಳಲ್ಲಿ ಇರುವುದಿಲ್ಲ. 15 ಲಕ್ಷ ಕಾರುಗಳಿಂದ ಹೊಗೆ ಕಡಿಮೆಯಾಗುತ್ತದೆ … ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಯಮದಿಂದಾಗಿ ಇಂದು ಬೆಳಿಗ್ಗೆ ದೆಹಲಿ ಟ್ರಾಫಿಕ್‌ ಕಡಿಮೆಯಿತ್ತು ಮತ್ತು ಚಾಲಕರು ನಿಯಮವನ್ನು ಪಾಲಿಸುತ್ತಿರುವುದು ಕಂಡುಬಂತು. ನವೆಂಬರ್ 10 ರ ಭಾನುವಾರ ಈ ನಿಯಮವು ಜಾರಿಯಾಗುವುದಿಲ್ಲ. ಇತರ ರಾಜ್ಯಗಳ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳಿಗೂ ಈ ನಿರ್ಬಂಧಗಳು ಅನ್ವಯವಾಗುತ್ತವೆ.

ಈ ಯೋಜನೆ ನವೆಂಬರ್ 15 ರಂದು ಕೊನೆಗೊಳ್ಳಲಿದೆ ಮತ್ತು ಮಾಲಿನ್ಯದ ಮಟ್ಟವು ಇದೇ ರೀತಿ ತೀವ್ರವಾಗಿ ಇದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯಿದೆ.

ಪ್ರತಿಪಕ್ಷ ಬಿಜೆಪಿಯ ವಿಜಯ್ ಗೋಯೆಲ್‌ರವರು ಈ ನಿಯಮವನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಇಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳಗೆ ನಿರ್ಭಂದವಿದ್ದರೂ ಸಹ ಅವರು ತಮ್ಮ ಬೆಸ ಸಂಖ್ಯೆಯ ವಾಹನವನ್ನು ಚಲಾಯಿಸಿದ್ದಾರೆ. ಅವರು ಈ ಯೋಜನೆಯನ್ನು “ಚುನಾವಣಾ ಗಿಮಿಕ್” ಮತ್ತು “ನಾಟಕ” ಎಂದು ಕರೆದಿದ್ದಾರೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು ವಿಜಯ್‌ ಗೋಯೆಲ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪರಿಸರ ಮಾಲಿನ್ಯ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರವು ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ದೆಹಲಿ ಸರ್ಕಾರ ಶುಕ್ರವಾರ ಶಾಲೆಗಳಿಗೆ ನವೆಂಬರ್‌ 5ರವರೆಗೆ ರಜೆ ನೀಡಿದೆ. ಜೊತೆಗೆ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿದೆ.

ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಬಳಸಲಾಗುವ ವಾಹನಗಳು ಮತ್ತು ಶಾಲಾ ಮಕ್ಕಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ವಿಐಪಿ ವಾಹನಗಳು, ಮಹಿಳೆಯರು, 12 ವರ್ಷ ವಯಸ್ಸಿನ ಮಕ್ಕಳು ಮತ್ತು ದೈಹಿಕವಾಗಿ ಅಂಗವಿಕಲರು ಹೊಂದಿರುವ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು.

ನಿಯಮಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 200 ಸಂಚಾರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಸುಮಾರು 5,000 ನಾಗರಿಕ ರಕ್ಷಣಾ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ. ಬೆಸ-ಸಮ ಯೋಜನೆ ಜಾರಿಯಲ್ಲಿರುವಾಗ ದೆಹಲಿ ಮೆಟ್ರೋ 61 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಲಿದೆ. ಕ್ಯಾಬ್ ಅಗ್ರಿಗೇಟರ್ಗಳಾದ ಉಬರ್ ಮತ್ತು ಓಲಾ ಬೆಸ-ಸಮ-ಯೋಜನೆಯ ಅವಧಿಯಲ್ಲಿ ದರ ಹೆಚ್ಚಳಮಾಡದಂತೆ ನಿರ್ದೇಶನ ನೀಡಲಾಗಿದೆ.

ದೆಹಲಿಯಲ್ಲಿನ ವಾಯುಮಾಲಿನ್ಯ ಅತಿರೇಕಕ್ಕೆ ಹೋಗಲು ಪಕ್ಕದ ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರು ಭತ್ತ ಮತ್ತು ಗೋಧಿಯ ತ್ಯಾಜ್ಯವನ್ನು ಸುಡುತ್ತಾರೆ. ಮುಂದಿನ ಕೃಷಿಗಾಗಿ ಭೂಮಿಯನ್ನು ಸಿದ್ದಪಡಿಸಲು ಅಲ್ಲಿರುವ ತ್ಯಾಜ್ಯವನ್ನು ಸುಡುವುದು ಅವರ ವಾಡಿಕೆ. ಇದರಿಂದ ಹೊಮ್ಮುವ ಹೊಗೆಯು ದೆಹಲಿಯನ್ನು ಆವರಿಸುತ್ತಿದ್ದು ಮಾಲಿನ್ಯಕ್ಕೆ ಕಾರಣವಾಗಿದೆ. ಜೊತೆಗೆ ಪಟಾಕಿ ಮತ್ತು ವಾಹನಗಳು ಹೊಗೆಯೂ ಸೇರಿಕೊಂಡು ದೆಹಲಿಯಲ್ಲಿ ಮಾಲಿನ್ಯವನ್ನು ಹೆಚ್ಚು ಮಾಡಿವೆ.

ಮಾಹಿತಿ: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...