Homeಮುಖಪುಟಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

- Advertisement -
- Advertisement -

ಮೂರು ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ತಲುಪಿರುವ ದೆಹಲಿಯ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿಗೆ ಬಂದಿದೆ. ಅಂದರೆ  ನವೆಂಬರ್‌ 15ರವರೆಗೆ ದೆಹಲಿಯ ಕಾರು ಚಾಲಕರು ವಾರದಲ್ಲಿ ನಾಲ್ಕು ದಿನ ಮಾತ್ರ ತಮ್ಮ ಕಾರುಗಳನ್ನು ಬಳಸಲು ಸಾಧ್ಯವಿದ್ದು ಉಳಿದ ದಿನಗಳಲ್ಲಿ ಬಳಸುವಂತಿಲ್ಲ.

ಬೆಸ-ಸಮ ನಿಯಮಗಳ ಪ್ರಕಾರ, ದಿನಾಂಕ ನವೆಂಬರ್ 4, 6, 8, 12 ಮತ್ತು 14 ರಂದು 1, 3, 5, 7, 9 ರಂತಹ ಬೆಸ ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅದೇ ರೀತಿ, ನವೆಂಬರ್ 5, 7, 9, 11, 13 ಮತ್ತು 15 ರಂದು 0, 2, 4, 6, 8  ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ದೆಹಲಿಯ ರಸ್ತೆಗಿಳಿಯುವಂತಿಲ್ಲ. ನವೆಂಬರ್‌ 10ರ ಭಾನುವಾರ ಮಾತ್ರ ಎಲ್ಲಾ ಕಾರುಗಳು ಸಂಚರಿಸಬಹುದಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ. 4,000 ದಂಡ ವಿಧಿಸಲಾಗುತ್ತದೆ. ಇದು ಬೆಸ-ಸಮ-ಯೋಜನೆಯ ಹಿಂದಿನ ಆವೃತ್ತಿಗಳಲ್ಲಿ ವಿಧಿಸಿದ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಕೆಲಸ ಮಾಡಲು ಅವರ ಕಾರಿನಲ್ಲಿ ತೆರಳಿದರು. “ಕಾರುಗಳನ್ನು ಹಂಚಿಕೊಳ್ಳಿ. ಇದು ಸ್ನೇಹವನ್ನು ಬೆಳೆಸುತ್ತದೆ, ಸಂಬಂಧಗಳನ್ನು ಬಲಪಡಿಸುತ್ತದೆ, ಪೆಟ್ರೋಲ್ ಅನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲಿ ತೆರಳಿದರು.

“ದೆಹಲಿಯಲ್ಲಿ ಪ್ರತಿದಿನ 30 ಲಕ್ಷ ಕಾರುಗಳು ರಸ್ತೆಗಿಳಿಯುತ್ತಿವೆ. ನಿಯಮದಂತೆ ಇಂದು 15 ಲಕ್ಷ ಕಾರುಗಳು ರಸ್ತೆಗಳಲ್ಲಿ ಇರುವುದಿಲ್ಲ. 15 ಲಕ್ಷ ಕಾರುಗಳಿಂದ ಹೊಗೆ ಕಡಿಮೆಯಾಗುತ್ತದೆ … ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಯಮದಿಂದಾಗಿ ಇಂದು ಬೆಳಿಗ್ಗೆ ದೆಹಲಿ ಟ್ರಾಫಿಕ್‌ ಕಡಿಮೆಯಿತ್ತು ಮತ್ತು ಚಾಲಕರು ನಿಯಮವನ್ನು ಪಾಲಿಸುತ್ತಿರುವುದು ಕಂಡುಬಂತು. ನವೆಂಬರ್ 10 ರ ಭಾನುವಾರ ಈ ನಿಯಮವು ಜಾರಿಯಾಗುವುದಿಲ್ಲ. ಇತರ ರಾಜ್ಯಗಳ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳಿಗೂ ಈ ನಿರ್ಬಂಧಗಳು ಅನ್ವಯವಾಗುತ್ತವೆ.

ಈ ಯೋಜನೆ ನವೆಂಬರ್ 15 ರಂದು ಕೊನೆಗೊಳ್ಳಲಿದೆ ಮತ್ತು ಮಾಲಿನ್ಯದ ಮಟ್ಟವು ಇದೇ ರೀತಿ ತೀವ್ರವಾಗಿ ಇದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯಿದೆ.

ಪ್ರತಿಪಕ್ಷ ಬಿಜೆಪಿಯ ವಿಜಯ್ ಗೋಯೆಲ್‌ರವರು ಈ ನಿಯಮವನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಇಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳಗೆ ನಿರ್ಭಂದವಿದ್ದರೂ ಸಹ ಅವರು ತಮ್ಮ ಬೆಸ ಸಂಖ್ಯೆಯ ವಾಹನವನ್ನು ಚಲಾಯಿಸಿದ್ದಾರೆ. ಅವರು ಈ ಯೋಜನೆಯನ್ನು “ಚುನಾವಣಾ ಗಿಮಿಕ್” ಮತ್ತು “ನಾಟಕ” ಎಂದು ಕರೆದಿದ್ದಾರೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು ವಿಜಯ್‌ ಗೋಯೆಲ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪರಿಸರ ಮಾಲಿನ್ಯ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರವು ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ದೆಹಲಿ ಸರ್ಕಾರ ಶುಕ್ರವಾರ ಶಾಲೆಗಳಿಗೆ ನವೆಂಬರ್‌ 5ರವರೆಗೆ ರಜೆ ನೀಡಿದೆ. ಜೊತೆಗೆ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿದೆ.

ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಬಳಸಲಾಗುವ ವಾಹನಗಳು ಮತ್ತು ಶಾಲಾ ಮಕ್ಕಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ವಿಐಪಿ ವಾಹನಗಳು, ಮಹಿಳೆಯರು, 12 ವರ್ಷ ವಯಸ್ಸಿನ ಮಕ್ಕಳು ಮತ್ತು ದೈಹಿಕವಾಗಿ ಅಂಗವಿಕಲರು ಹೊಂದಿರುವ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು.

ನಿಯಮಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 200 ಸಂಚಾರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಸುಮಾರು 5,000 ನಾಗರಿಕ ರಕ್ಷಣಾ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ. ಬೆಸ-ಸಮ ಯೋಜನೆ ಜಾರಿಯಲ್ಲಿರುವಾಗ ದೆಹಲಿ ಮೆಟ್ರೋ 61 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಲಿದೆ. ಕ್ಯಾಬ್ ಅಗ್ರಿಗೇಟರ್ಗಳಾದ ಉಬರ್ ಮತ್ತು ಓಲಾ ಬೆಸ-ಸಮ-ಯೋಜನೆಯ ಅವಧಿಯಲ್ಲಿ ದರ ಹೆಚ್ಚಳಮಾಡದಂತೆ ನಿರ್ದೇಶನ ನೀಡಲಾಗಿದೆ.

ದೆಹಲಿಯಲ್ಲಿನ ವಾಯುಮಾಲಿನ್ಯ ಅತಿರೇಕಕ್ಕೆ ಹೋಗಲು ಪಕ್ಕದ ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರು ಭತ್ತ ಮತ್ತು ಗೋಧಿಯ ತ್ಯಾಜ್ಯವನ್ನು ಸುಡುತ್ತಾರೆ. ಮುಂದಿನ ಕೃಷಿಗಾಗಿ ಭೂಮಿಯನ್ನು ಸಿದ್ದಪಡಿಸಲು ಅಲ್ಲಿರುವ ತ್ಯಾಜ್ಯವನ್ನು ಸುಡುವುದು ಅವರ ವಾಡಿಕೆ. ಇದರಿಂದ ಹೊಮ್ಮುವ ಹೊಗೆಯು ದೆಹಲಿಯನ್ನು ಆವರಿಸುತ್ತಿದ್ದು ಮಾಲಿನ್ಯಕ್ಕೆ ಕಾರಣವಾಗಿದೆ. ಜೊತೆಗೆ ಪಟಾಕಿ ಮತ್ತು ವಾಹನಗಳು ಹೊಗೆಯೂ ಸೇರಿಕೊಂಡು ದೆಹಲಿಯಲ್ಲಿ ಮಾಲಿನ್ಯವನ್ನು ಹೆಚ್ಚು ಮಾಡಿವೆ.

ಮಾಹಿತಿ: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...