Homeಮುಖಪುಟಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

- Advertisement -
- Advertisement -

ಮೂರು ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ತಲುಪಿರುವ ದೆಹಲಿಯ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿಗೆ ಬಂದಿದೆ. ಅಂದರೆ  ನವೆಂಬರ್‌ 15ರವರೆಗೆ ದೆಹಲಿಯ ಕಾರು ಚಾಲಕರು ವಾರದಲ್ಲಿ ನಾಲ್ಕು ದಿನ ಮಾತ್ರ ತಮ್ಮ ಕಾರುಗಳನ್ನು ಬಳಸಲು ಸಾಧ್ಯವಿದ್ದು ಉಳಿದ ದಿನಗಳಲ್ಲಿ ಬಳಸುವಂತಿಲ್ಲ.

ಬೆಸ-ಸಮ ನಿಯಮಗಳ ಪ್ರಕಾರ, ದಿನಾಂಕ ನವೆಂಬರ್ 4, 6, 8, 12 ಮತ್ತು 14 ರಂದು 1, 3, 5, 7, 9 ರಂತಹ ಬೆಸ ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅದೇ ರೀತಿ, ನವೆಂಬರ್ 5, 7, 9, 11, 13 ಮತ್ತು 15 ರಂದು 0, 2, 4, 6, 8  ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ದೆಹಲಿಯ ರಸ್ತೆಗಿಳಿಯುವಂತಿಲ್ಲ. ನವೆಂಬರ್‌ 10ರ ಭಾನುವಾರ ಮಾತ್ರ ಎಲ್ಲಾ ಕಾರುಗಳು ಸಂಚರಿಸಬಹುದಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ. 4,000 ದಂಡ ವಿಧಿಸಲಾಗುತ್ತದೆ. ಇದು ಬೆಸ-ಸಮ-ಯೋಜನೆಯ ಹಿಂದಿನ ಆವೃತ್ತಿಗಳಲ್ಲಿ ವಿಧಿಸಿದ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಕೆಲಸ ಮಾಡಲು ಅವರ ಕಾರಿನಲ್ಲಿ ತೆರಳಿದರು. “ಕಾರುಗಳನ್ನು ಹಂಚಿಕೊಳ್ಳಿ. ಇದು ಸ್ನೇಹವನ್ನು ಬೆಳೆಸುತ್ತದೆ, ಸಂಬಂಧಗಳನ್ನು ಬಲಪಡಿಸುತ್ತದೆ, ಪೆಟ್ರೋಲ್ ಅನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲಿ ತೆರಳಿದರು.

“ದೆಹಲಿಯಲ್ಲಿ ಪ್ರತಿದಿನ 30 ಲಕ್ಷ ಕಾರುಗಳು ರಸ್ತೆಗಿಳಿಯುತ್ತಿವೆ. ನಿಯಮದಂತೆ ಇಂದು 15 ಲಕ್ಷ ಕಾರುಗಳು ರಸ್ತೆಗಳಲ್ಲಿ ಇರುವುದಿಲ್ಲ. 15 ಲಕ್ಷ ಕಾರುಗಳಿಂದ ಹೊಗೆ ಕಡಿಮೆಯಾಗುತ್ತದೆ … ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಯಮದಿಂದಾಗಿ ಇಂದು ಬೆಳಿಗ್ಗೆ ದೆಹಲಿ ಟ್ರಾಫಿಕ್‌ ಕಡಿಮೆಯಿತ್ತು ಮತ್ತು ಚಾಲಕರು ನಿಯಮವನ್ನು ಪಾಲಿಸುತ್ತಿರುವುದು ಕಂಡುಬಂತು. ನವೆಂಬರ್ 10 ರ ಭಾನುವಾರ ಈ ನಿಯಮವು ಜಾರಿಯಾಗುವುದಿಲ್ಲ. ಇತರ ರಾಜ್ಯಗಳ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳಿಗೂ ಈ ನಿರ್ಬಂಧಗಳು ಅನ್ವಯವಾಗುತ್ತವೆ.

ಈ ಯೋಜನೆ ನವೆಂಬರ್ 15 ರಂದು ಕೊನೆಗೊಳ್ಳಲಿದೆ ಮತ್ತು ಮಾಲಿನ್ಯದ ಮಟ್ಟವು ಇದೇ ರೀತಿ ತೀವ್ರವಾಗಿ ಇದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯಿದೆ.

ಪ್ರತಿಪಕ್ಷ ಬಿಜೆಪಿಯ ವಿಜಯ್ ಗೋಯೆಲ್‌ರವರು ಈ ನಿಯಮವನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಇಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳಗೆ ನಿರ್ಭಂದವಿದ್ದರೂ ಸಹ ಅವರು ತಮ್ಮ ಬೆಸ ಸಂಖ್ಯೆಯ ವಾಹನವನ್ನು ಚಲಾಯಿಸಿದ್ದಾರೆ. ಅವರು ಈ ಯೋಜನೆಯನ್ನು “ಚುನಾವಣಾ ಗಿಮಿಕ್” ಮತ್ತು “ನಾಟಕ” ಎಂದು ಕರೆದಿದ್ದಾರೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು ವಿಜಯ್‌ ಗೋಯೆಲ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪರಿಸರ ಮಾಲಿನ್ಯ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರವು ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ದೆಹಲಿ ಸರ್ಕಾರ ಶುಕ್ರವಾರ ಶಾಲೆಗಳಿಗೆ ನವೆಂಬರ್‌ 5ರವರೆಗೆ ರಜೆ ನೀಡಿದೆ. ಜೊತೆಗೆ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿದೆ.

ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಬಳಸಲಾಗುವ ವಾಹನಗಳು ಮತ್ತು ಶಾಲಾ ಮಕ್ಕಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ವಿಐಪಿ ವಾಹನಗಳು, ಮಹಿಳೆಯರು, 12 ವರ್ಷ ವಯಸ್ಸಿನ ಮಕ್ಕಳು ಮತ್ತು ದೈಹಿಕವಾಗಿ ಅಂಗವಿಕಲರು ಹೊಂದಿರುವ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು.

ನಿಯಮಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 200 ಸಂಚಾರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಸುಮಾರು 5,000 ನಾಗರಿಕ ರಕ್ಷಣಾ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ. ಬೆಸ-ಸಮ ಯೋಜನೆ ಜಾರಿಯಲ್ಲಿರುವಾಗ ದೆಹಲಿ ಮೆಟ್ರೋ 61 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಲಿದೆ. ಕ್ಯಾಬ್ ಅಗ್ರಿಗೇಟರ್ಗಳಾದ ಉಬರ್ ಮತ್ತು ಓಲಾ ಬೆಸ-ಸಮ-ಯೋಜನೆಯ ಅವಧಿಯಲ್ಲಿ ದರ ಹೆಚ್ಚಳಮಾಡದಂತೆ ನಿರ್ದೇಶನ ನೀಡಲಾಗಿದೆ.

ದೆಹಲಿಯಲ್ಲಿನ ವಾಯುಮಾಲಿನ್ಯ ಅತಿರೇಕಕ್ಕೆ ಹೋಗಲು ಪಕ್ಕದ ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರು ಭತ್ತ ಮತ್ತು ಗೋಧಿಯ ತ್ಯಾಜ್ಯವನ್ನು ಸುಡುತ್ತಾರೆ. ಮುಂದಿನ ಕೃಷಿಗಾಗಿ ಭೂಮಿಯನ್ನು ಸಿದ್ದಪಡಿಸಲು ಅಲ್ಲಿರುವ ತ್ಯಾಜ್ಯವನ್ನು ಸುಡುವುದು ಅವರ ವಾಡಿಕೆ. ಇದರಿಂದ ಹೊಮ್ಮುವ ಹೊಗೆಯು ದೆಹಲಿಯನ್ನು ಆವರಿಸುತ್ತಿದ್ದು ಮಾಲಿನ್ಯಕ್ಕೆ ಕಾರಣವಾಗಿದೆ. ಜೊತೆಗೆ ಪಟಾಕಿ ಮತ್ತು ವಾಹನಗಳು ಹೊಗೆಯೂ ಸೇರಿಕೊಂಡು ದೆಹಲಿಯಲ್ಲಿ ಮಾಲಿನ್ಯವನ್ನು ಹೆಚ್ಚು ಮಾಡಿವೆ.

ಮಾಹಿತಿ: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...