Homeಮುಖಪುಟಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

- Advertisement -
- Advertisement -

ಮೂರು ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ತಲುಪಿರುವ ದೆಹಲಿಯ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿಗೆ ಬಂದಿದೆ. ಅಂದರೆ  ನವೆಂಬರ್‌ 15ರವರೆಗೆ ದೆಹಲಿಯ ಕಾರು ಚಾಲಕರು ವಾರದಲ್ಲಿ ನಾಲ್ಕು ದಿನ ಮಾತ್ರ ತಮ್ಮ ಕಾರುಗಳನ್ನು ಬಳಸಲು ಸಾಧ್ಯವಿದ್ದು ಉಳಿದ ದಿನಗಳಲ್ಲಿ ಬಳಸುವಂತಿಲ್ಲ.

ಬೆಸ-ಸಮ ನಿಯಮಗಳ ಪ್ರಕಾರ, ದಿನಾಂಕ ನವೆಂಬರ್ 4, 6, 8, 12 ಮತ್ತು 14 ರಂದು 1, 3, 5, 7, 9 ರಂತಹ ಬೆಸ ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅದೇ ರೀತಿ, ನವೆಂಬರ್ 5, 7, 9, 11, 13 ಮತ್ತು 15 ರಂದು 0, 2, 4, 6, 8  ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ದೆಹಲಿಯ ರಸ್ತೆಗಿಳಿಯುವಂತಿಲ್ಲ. ನವೆಂಬರ್‌ 10ರ ಭಾನುವಾರ ಮಾತ್ರ ಎಲ್ಲಾ ಕಾರುಗಳು ಸಂಚರಿಸಬಹುದಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ. 4,000 ದಂಡ ವಿಧಿಸಲಾಗುತ್ತದೆ. ಇದು ಬೆಸ-ಸಮ-ಯೋಜನೆಯ ಹಿಂದಿನ ಆವೃತ್ತಿಗಳಲ್ಲಿ ವಿಧಿಸಿದ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಕೆಲಸ ಮಾಡಲು ಅವರ ಕಾರಿನಲ್ಲಿ ತೆರಳಿದರು. “ಕಾರುಗಳನ್ನು ಹಂಚಿಕೊಳ್ಳಿ. ಇದು ಸ್ನೇಹವನ್ನು ಬೆಳೆಸುತ್ತದೆ, ಸಂಬಂಧಗಳನ್ನು ಬಲಪಡಿಸುತ್ತದೆ, ಪೆಟ್ರೋಲ್ ಅನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲಿ ತೆರಳಿದರು.

“ದೆಹಲಿಯಲ್ಲಿ ಪ್ರತಿದಿನ 30 ಲಕ್ಷ ಕಾರುಗಳು ರಸ್ತೆಗಿಳಿಯುತ್ತಿವೆ. ನಿಯಮದಂತೆ ಇಂದು 15 ಲಕ್ಷ ಕಾರುಗಳು ರಸ್ತೆಗಳಲ್ಲಿ ಇರುವುದಿಲ್ಲ. 15 ಲಕ್ಷ ಕಾರುಗಳಿಂದ ಹೊಗೆ ಕಡಿಮೆಯಾಗುತ್ತದೆ … ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಯಮದಿಂದಾಗಿ ಇಂದು ಬೆಳಿಗ್ಗೆ ದೆಹಲಿ ಟ್ರಾಫಿಕ್‌ ಕಡಿಮೆಯಿತ್ತು ಮತ್ತು ಚಾಲಕರು ನಿಯಮವನ್ನು ಪಾಲಿಸುತ್ತಿರುವುದು ಕಂಡುಬಂತು. ನವೆಂಬರ್ 10 ರ ಭಾನುವಾರ ಈ ನಿಯಮವು ಜಾರಿಯಾಗುವುದಿಲ್ಲ. ಇತರ ರಾಜ್ಯಗಳ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳಿಗೂ ಈ ನಿರ್ಬಂಧಗಳು ಅನ್ವಯವಾಗುತ್ತವೆ.

ಈ ಯೋಜನೆ ನವೆಂಬರ್ 15 ರಂದು ಕೊನೆಗೊಳ್ಳಲಿದೆ ಮತ್ತು ಮಾಲಿನ್ಯದ ಮಟ್ಟವು ಇದೇ ರೀತಿ ತೀವ್ರವಾಗಿ ಇದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯಿದೆ.

ಪ್ರತಿಪಕ್ಷ ಬಿಜೆಪಿಯ ವಿಜಯ್ ಗೋಯೆಲ್‌ರವರು ಈ ನಿಯಮವನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಇಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳಗೆ ನಿರ್ಭಂದವಿದ್ದರೂ ಸಹ ಅವರು ತಮ್ಮ ಬೆಸ ಸಂಖ್ಯೆಯ ವಾಹನವನ್ನು ಚಲಾಯಿಸಿದ್ದಾರೆ. ಅವರು ಈ ಯೋಜನೆಯನ್ನು “ಚುನಾವಣಾ ಗಿಮಿಕ್” ಮತ್ತು “ನಾಟಕ” ಎಂದು ಕರೆದಿದ್ದಾರೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು ವಿಜಯ್‌ ಗೋಯೆಲ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪರಿಸರ ಮಾಲಿನ್ಯ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರವು ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ದೆಹಲಿ ಸರ್ಕಾರ ಶುಕ್ರವಾರ ಶಾಲೆಗಳಿಗೆ ನವೆಂಬರ್‌ 5ರವರೆಗೆ ರಜೆ ನೀಡಿದೆ. ಜೊತೆಗೆ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿದೆ.

ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಬಳಸಲಾಗುವ ವಾಹನಗಳು ಮತ್ತು ಶಾಲಾ ಮಕ್ಕಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ವಿಐಪಿ ವಾಹನಗಳು, ಮಹಿಳೆಯರು, 12 ವರ್ಷ ವಯಸ್ಸಿನ ಮಕ್ಕಳು ಮತ್ತು ದೈಹಿಕವಾಗಿ ಅಂಗವಿಕಲರು ಹೊಂದಿರುವ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು.

ನಿಯಮಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 200 ಸಂಚಾರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಸುಮಾರು 5,000 ನಾಗರಿಕ ರಕ್ಷಣಾ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ. ಬೆಸ-ಸಮ ಯೋಜನೆ ಜಾರಿಯಲ್ಲಿರುವಾಗ ದೆಹಲಿ ಮೆಟ್ರೋ 61 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಲಿದೆ. ಕ್ಯಾಬ್ ಅಗ್ರಿಗೇಟರ್ಗಳಾದ ಉಬರ್ ಮತ್ತು ಓಲಾ ಬೆಸ-ಸಮ-ಯೋಜನೆಯ ಅವಧಿಯಲ್ಲಿ ದರ ಹೆಚ್ಚಳಮಾಡದಂತೆ ನಿರ್ದೇಶನ ನೀಡಲಾಗಿದೆ.

ದೆಹಲಿಯಲ್ಲಿನ ವಾಯುಮಾಲಿನ್ಯ ಅತಿರೇಕಕ್ಕೆ ಹೋಗಲು ಪಕ್ಕದ ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರು ಭತ್ತ ಮತ್ತು ಗೋಧಿಯ ತ್ಯಾಜ್ಯವನ್ನು ಸುಡುತ್ತಾರೆ. ಮುಂದಿನ ಕೃಷಿಗಾಗಿ ಭೂಮಿಯನ್ನು ಸಿದ್ದಪಡಿಸಲು ಅಲ್ಲಿರುವ ತ್ಯಾಜ್ಯವನ್ನು ಸುಡುವುದು ಅವರ ವಾಡಿಕೆ. ಇದರಿಂದ ಹೊಮ್ಮುವ ಹೊಗೆಯು ದೆಹಲಿಯನ್ನು ಆವರಿಸುತ್ತಿದ್ದು ಮಾಲಿನ್ಯಕ್ಕೆ ಕಾರಣವಾಗಿದೆ. ಜೊತೆಗೆ ಪಟಾಕಿ ಮತ್ತು ವಾಹನಗಳು ಹೊಗೆಯೂ ಸೇರಿಕೊಂಡು ದೆಹಲಿಯಲ್ಲಿ ಮಾಲಿನ್ಯವನ್ನು ಹೆಚ್ಚು ಮಾಡಿವೆ.

ಮಾಹಿತಿ: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...