Homeಮುಖಪುಟಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

- Advertisement -
- Advertisement -

ಮೂರು ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ತಲುಪಿರುವ ದೆಹಲಿಯ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿಗೆ ಬಂದಿದೆ. ಅಂದರೆ  ನವೆಂಬರ್‌ 15ರವರೆಗೆ ದೆಹಲಿಯ ಕಾರು ಚಾಲಕರು ವಾರದಲ್ಲಿ ನಾಲ್ಕು ದಿನ ಮಾತ್ರ ತಮ್ಮ ಕಾರುಗಳನ್ನು ಬಳಸಲು ಸಾಧ್ಯವಿದ್ದು ಉಳಿದ ದಿನಗಳಲ್ಲಿ ಬಳಸುವಂತಿಲ್ಲ.

ಬೆಸ-ಸಮ ನಿಯಮಗಳ ಪ್ರಕಾರ, ದಿನಾಂಕ ನವೆಂಬರ್ 4, 6, 8, 12 ಮತ್ತು 14 ರಂದು 1, 3, 5, 7, 9 ರಂತಹ ಬೆಸ ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ರಸ್ತೆಗಿಳಿಯುವಂತಿಲ್ಲ. ಅದೇ ರೀತಿ, ನವೆಂಬರ್ 5, 7, 9, 11, 13 ಮತ್ತು 15 ರಂದು 0, 2, 4, 6, 8  ಅಂಕೆಗಳೊಂದಿಗೆ ಕೊನೆಗೊಳ್ಳುವ ನೋಂದಣಿಯುಳ್ಳ ವಾಹನಗಳು ದೆಹಲಿಯ ರಸ್ತೆಗಿಳಿಯುವಂತಿಲ್ಲ. ನವೆಂಬರ್‌ 10ರ ಭಾನುವಾರ ಮಾತ್ರ ಎಲ್ಲಾ ಕಾರುಗಳು ಸಂಚರಿಸಬಹುದಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ರೂ. 4,000 ದಂಡ ವಿಧಿಸಲಾಗುತ್ತದೆ. ಇದು ಬೆಸ-ಸಮ-ಯೋಜನೆಯ ಹಿಂದಿನ ಆವೃತ್ತಿಗಳಲ್ಲಿ ವಿಧಿಸಿದ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಕೆಲಸ ಮಾಡಲು ಅವರ ಕಾರಿನಲ್ಲಿ ತೆರಳಿದರು. “ಕಾರುಗಳನ್ನು ಹಂಚಿಕೊಳ್ಳಿ. ಇದು ಸ್ನೇಹವನ್ನು ಬೆಳೆಸುತ್ತದೆ, ಸಂಬಂಧಗಳನ್ನು ಬಲಪಡಿಸುತ್ತದೆ, ಪೆಟ್ರೋಲ್ ಅನ್ನು ಉಳಿಸುತ್ತದೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲಿ ತೆರಳಿದರು.

“ದೆಹಲಿಯಲ್ಲಿ ಪ್ರತಿದಿನ 30 ಲಕ್ಷ ಕಾರುಗಳು ರಸ್ತೆಗಿಳಿಯುತ್ತಿವೆ. ನಿಯಮದಂತೆ ಇಂದು 15 ಲಕ್ಷ ಕಾರುಗಳು ರಸ್ತೆಗಳಲ್ಲಿ ಇರುವುದಿಲ್ಲ. 15 ಲಕ್ಷ ಕಾರುಗಳಿಂದ ಹೊಗೆ ಕಡಿಮೆಯಾಗುತ್ತದೆ … ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಯಮದಿಂದಾಗಿ ಇಂದು ಬೆಳಿಗ್ಗೆ ದೆಹಲಿ ಟ್ರಾಫಿಕ್‌ ಕಡಿಮೆಯಿತ್ತು ಮತ್ತು ಚಾಲಕರು ನಿಯಮವನ್ನು ಪಾಲಿಸುತ್ತಿರುವುದು ಕಂಡುಬಂತು. ನವೆಂಬರ್ 10 ರ ಭಾನುವಾರ ಈ ನಿಯಮವು ಜಾರಿಯಾಗುವುದಿಲ್ಲ. ಇತರ ರಾಜ್ಯಗಳ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳಿಗೂ ಈ ನಿರ್ಬಂಧಗಳು ಅನ್ವಯವಾಗುತ್ತವೆ.

ಈ ಯೋಜನೆ ನವೆಂಬರ್ 15 ರಂದು ಕೊನೆಗೊಳ್ಳಲಿದೆ ಮತ್ತು ಮಾಲಿನ್ಯದ ಮಟ್ಟವು ಇದೇ ರೀತಿ ತೀವ್ರವಾಗಿ ಇದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯಿದೆ.

ಪ್ರತಿಪಕ್ಷ ಬಿಜೆಪಿಯ ವಿಜಯ್ ಗೋಯೆಲ್‌ರವರು ಈ ನಿಯಮವನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಇಂದು ಬೆಸ ಸಂಖ್ಯೆಯಿಂದ ಕೊನೆಗೊಳ್ಳುವ ವಾಹನಗಳಗೆ ನಿರ್ಭಂದವಿದ್ದರೂ ಸಹ ಅವರು ತಮ್ಮ ಬೆಸ ಸಂಖ್ಯೆಯ ವಾಹನವನ್ನು ಚಲಾಯಿಸಿದ್ದಾರೆ. ಅವರು ಈ ಯೋಜನೆಯನ್ನು “ಚುನಾವಣಾ ಗಿಮಿಕ್” ಮತ್ತು “ನಾಟಕ” ಎಂದು ಕರೆದಿದ್ದಾರೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು ವಿಜಯ್‌ ಗೋಯೆಲ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪರಿಸರ ಮಾಲಿನ್ಯ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರವು ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ದೆಹಲಿ ಸರ್ಕಾರ ಶುಕ್ರವಾರ ಶಾಲೆಗಳಿಗೆ ನವೆಂಬರ್‌ 5ರವರೆಗೆ ರಜೆ ನೀಡಿದೆ. ಜೊತೆಗೆ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿದೆ.

ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಬಳಸಲಾಗುವ ವಾಹನಗಳು ಮತ್ತು ಶಾಲಾ ಮಕ್ಕಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ವಿಐಪಿ ವಾಹನಗಳು, ಮಹಿಳೆಯರು, 12 ವರ್ಷ ವಯಸ್ಸಿನ ಮಕ್ಕಳು ಮತ್ತು ದೈಹಿಕವಾಗಿ ಅಂಗವಿಕಲರು ಹೊಂದಿರುವ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು.

ನಿಯಮಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 200 ಸಂಚಾರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಸುಮಾರು 5,000 ನಾಗರಿಕ ರಕ್ಷಣಾ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ. ಬೆಸ-ಸಮ ಯೋಜನೆ ಜಾರಿಯಲ್ಲಿರುವಾಗ ದೆಹಲಿ ಮೆಟ್ರೋ 61 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಲಿದೆ. ಕ್ಯಾಬ್ ಅಗ್ರಿಗೇಟರ್ಗಳಾದ ಉಬರ್ ಮತ್ತು ಓಲಾ ಬೆಸ-ಸಮ-ಯೋಜನೆಯ ಅವಧಿಯಲ್ಲಿ ದರ ಹೆಚ್ಚಳಮಾಡದಂತೆ ನಿರ್ದೇಶನ ನೀಡಲಾಗಿದೆ.

ದೆಹಲಿಯಲ್ಲಿನ ವಾಯುಮಾಲಿನ್ಯ ಅತಿರೇಕಕ್ಕೆ ಹೋಗಲು ಪಕ್ಕದ ಪಂಜಾಬ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರು ಭತ್ತ ಮತ್ತು ಗೋಧಿಯ ತ್ಯಾಜ್ಯವನ್ನು ಸುಡುತ್ತಾರೆ. ಮುಂದಿನ ಕೃಷಿಗಾಗಿ ಭೂಮಿಯನ್ನು ಸಿದ್ದಪಡಿಸಲು ಅಲ್ಲಿರುವ ತ್ಯಾಜ್ಯವನ್ನು ಸುಡುವುದು ಅವರ ವಾಡಿಕೆ. ಇದರಿಂದ ಹೊಮ್ಮುವ ಹೊಗೆಯು ದೆಹಲಿಯನ್ನು ಆವರಿಸುತ್ತಿದ್ದು ಮಾಲಿನ್ಯಕ್ಕೆ ಕಾರಣವಾಗಿದೆ. ಜೊತೆಗೆ ಪಟಾಕಿ ಮತ್ತು ವಾಹನಗಳು ಹೊಗೆಯೂ ಸೇರಿಕೊಂಡು ದೆಹಲಿಯಲ್ಲಿ ಮಾಲಿನ್ಯವನ್ನು ಹೆಚ್ಚು ಮಾಡಿವೆ.

ಮಾಹಿತಿ: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...