Homeಮುಖಪುಟಒಡಿಶಾ: ವ್ಯಕ್ತಿಯೋರ್ವನಿಗೆ ಥಳಿಸಿ, ಆತನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ಒಡಿಶಾ: ವ್ಯಕ್ತಿಯೋರ್ವನಿಗೆ ಥಳಿಸಿ, ಆತನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ವ್ಯಕ್ತಿಯೊಬ್ಬನನ್ನು ಥಳಿಸಿ ಆತನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಅಕ್ಟೋಬರ್ 21ರಂದು ಸಂಜೆ ಜಿಲ್ಲೆಯ ಬರುನಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ದಂಪತಿಗಳು ಜಾಜ್‌ಪುರ ಜಿಲ್ಲೆಯವರಾಗಿದ್ದು, ಮಹಿಳೆ ತನ್ನ ಅಧ್ಯಯನಕ್ಕಾಗಿ ಭುವನ್‌ನಲ್ಲಿ ನೆಲೆಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

”ದಂಪತಿ ಶನಿವಾರ ಸಂಜೆ ಮೋಟಾರು ಸೈಕಲ್‌ನಲ್ಲಿ ಭುವನ್‌ನಿಂದ ತಮ್ಮ ಮನೆಗೆ ಹೋಗುತ್ತಿದ್ದರು. ಆರೋಪಿಗಳ ಗುಂಪು ಅವರನ್ನು ಬರುನಾ ಪ್ರದೇಶದ ಕಾಲುವೆಯ ಬಳಿ ಅಡ್ಡಗಟ್ಟಿದ್ದಾರೆ. ಈ ವೇಳೆ ವ್ಯಕ್ತಿಯನ್ನು ಥಳಿಸಿ ಅವರ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ. ಅವರು ”ತಮ್ಮ ಪತ್ನಿಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಭುವನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಕುರಿತು ಧೆಂಕನಲ್ ಎಸ್ಪಿ ಜ್ಞಾನ್ ರಂಜನ್ ಮೊಹಾಪಾತ್ರ ಮಾತನಾಡಿ, ”ಮಹಿಳೆಯ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಾವು ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿದ್ದೇವೆ. ಅವರಲ್ಲಿ ಇಬ್ಬರನ್ನು ಬಂಧಿಸಿದ್ದೇವೆ ಮತ್ತು ಇನ್ನೂ ಮೂವರು ಆರೋಪಿಗಳನ್ನು ಹಿಡಿಯಲು ಶೋಧ ನಡೆಸಿದ್ದೇವೆ” ಎಂದು ತಿಳಿಸಿದ್ದಾರೆ.

”ಅಪರಾಧಕ್ಕೆ ಬಳಸಿದ ವಾಹನಗಳನ್ನೂ ಗುರುತಿಸಲಾಗಿದೆ ಎಂದರು. ತನಿಖೆಯು ಪ್ರಾಥಮಿಕ ಹಂತದಲ್ಲಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯ ವರದಿ ನಮಗೆ ಇನ್ನೂ ಬಂದಿಲ್ಲ. ಆದರೆ, ಇದು ಸತ್ಯ ಘಟನೆ ಎಂದು ತೋರುತ್ತದೆ. ನಾವು ತನಿಖೆಯನ್ನು ಚುರುಕುಗೊಳಿಸುತ್ತಿದ್ದೇವೆ, ಎಲ್ಲಾ ಆರೋಪಿಗಳನ್ನು ಬಂಧಿಸುತ್ತೇವೆ” ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...